Advertisement

Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

05:32 PM Jul 01, 2024 | Team Udayavani |

ಬೆಳಗಾವಿ: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

Advertisement

ಚನ್ನಮ್ನ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಹಾಲಿನ ಪ್ರೋತ್ಸಾಹ ಧನವನ್ನು ಐದರಿಂದ ಹತ್ತು ರೂಪಾಯಿಗೆ ಏರಿಕೆ ಮಾಡಬೇಕು. ಸದ್ಯ ಗ್ರಾಹಕರಿಗೆ ಏರಿಕೆ ಮಾಡಿರುವ ಹಾಲಿನ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಸಿ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಆರೋಪಿಸಿದರು.

ಜನರ ಮೇಲೆ ಸರ್ಕಾರ ಲೋಕಸಭೆ ಚುನಾವಣೆಯ ಸೋಲಿನ ಪ್ರತಿಕಾರವನ್ನು ತೀರಿಸಿಕೊಂಡಂತೆ ಕಾಣುತ್ತಿದೆ ಎಂದು ಟೀಕೆ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next