Advertisement

Belagavi; ಮತ್ತೆ ಚನ್ನಮ್ಮ ಮೂರ್ತಿ ವಿವಾದ: ಮೂರ್ತಿ ತೆರವು ಮಾಡಿದ ಪೊಲೀಸರು

06:37 PM Aug 14, 2023 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಕಿತ್ತೂರು ಚನ್ನಮ್ಮ ಮೂರ್ತಿ ವಿವಾದ ಭುಗಿಲೆದ್ದಿದ್ದು, ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಚನ್ನಮ್ಮ ಮೂರ್ತಿಯನ್ನು ಪೊಲೀಸರು ತೆರವು ಮಾಡಿದ್ದಾರೆ.

Advertisement

ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಕಿತ್ತೂರು ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಅನುಮತಿ ಪಡೆಯದೆ ಮೂರ್ತಿ ಪ್ರತಿಷ್ಠಾಪಿಸಿದ್ದಾರೆಂದು ಪೊಲೀಸರು ತೆರವು ಮಾಡಿದ್ದಾರೆ.

ಇದನ್ನೂ ಓದಿ:Ramanagar; ಈಜಲು ಹೋಗಿ ನೀರು ಪಾಲಾದ ಬಾಲಕ: ಹೆದರಿ ಓಡಿದ ಸ್ನೇಹಿತರು

ನಾಲ್ಕು ವರ್ಷದಿಂದ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಗ್ರಾ.ಪಂ ಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಮರಾಠಿಗರ ಪ್ರಾಬಲ್ಯವಿರುವ ಧಾಮಣೆ ಗ್ರಾಮದಲ್ಲಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ಮಾಡಲಾಗುತ್ತಿದೆ ಎಂದು ಕನ್ನಡಿಗರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕನ್ನಡ ಭಾಷಿಕರು ಏಕಾಏಕಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಇದರ ವಿಡಿಯೋ ಮಾಡಿಕೊಳ್ಳುತ್ತಿದ್ದ ಯುವಕರನ್ನು ಅಟ್ಟಾಡಿಸಿದ್ದಾರೆ.

ಮೂರ್ತಿ ಪ್ರತಿಷ್ಠಾಪಿಸಿದ್ದ ಯುವಕರನ್ನು ವಶಕ್ಕೆ ಪಡೆದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮೂರ್ತಿ ತೆರವು ಮಾಡಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಸ್ಥಳದಲ್ಲಿ ಡಿಸಿಪಿ, ಮೂವರು ಪಿಐ ಸೇರಿ ಐವತ್ತಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next