Advertisement

Belagavi: ಪಾಲಿಕೆ ಸದಸ್ಯ ಅಭಿಜಿತ್ ಜವಳಕರ್ ಬಂಧನ

10:57 AM Nov 27, 2023 | Team Udayavani |

ಬೆಳಗಾವಿ: ಇಲ್ಲಿನ ಭಾಗ್ಯ ನಗರದ 9ನೇ ಕ್ರಾಸ್ ಮನೆಯ ಮೇಲೆ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ರಮೇಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ್ ಅವರನ್ನು ಟಿಳಕವಾಡಿ ಠಾಣೆ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.

Advertisement

ಮನೆಯ ಮೇಲೆ ಮೊಬೈಲ್ ಟವರ್ ಅಳವಡಿಸುವದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ರಮೇಶ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅಭಿಜಿತ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ರಾಮಪ್ಪ ತಿಳಿಸಿದರು.

ಅಭಿಜಿತ ಬಂಧನಕ್ಕೆ ಒತ್ತಾಯಿಸಿ ಶ್ರೀರಾಮ ಸೇನೆ ಹಿಂದೂಸ್ಥಾನ್ ಸಂಘಟನೆ ಕಾರ್ಯಕರ್ತರು ಭಾನುವಾರ ಸಂಜೆ ಟಿಳಕವಾಡಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಈ ಮಧ್ಯೆ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ್ ಬಂಧನದ ಬಗ್ಗೆ ವಿಚಾರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾಜಿ ಶಾಸಕ ಅನಿಲ ಬೆನಕೆ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಬಂಧಿತ ಅಭಿಜಿತ್ ಅವರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next