Advertisement

Tragedy: ಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ‌ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿ

11:10 AM Jan 03, 2024 | Team Udayavani |

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ ಕ್ಷೇತ್ರದಲ್ಲೇ ಅಮಾನವೀಯ ಕೃತ್ಯವೊಂದು ನಡೆದಿರುವುದು ಬೆಳಕಿಗೆ ಬಂದಿದ್ದು, ಅಂಗನವಾಡಿ ‌ಶಿಕ್ಷಕಿಯ ಮೂಗು ಕತ್ತರಿಸಿ ರಾಕ್ಷಸೀಯ ಕೃತ್ಯ ಮೆರೆದ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮನೆಯ ಮಾಲೀಕ ಕಲ್ಯಾಣಿ ಮೋರೆ ಎಂಬಾನಿಂದ ಹಲ್ಲೆ ಆರೋಪ ಕೇಳಿ ಬಂದಿದ್ದು, ಬೆಳಗಾವಿ ತಾಲೂಕಿನ ‌ಬಸುರ್ತೆ ಗ್ರಾಮದ ಸಹಾಯಕಿ ಸುಗಂಧಾ ಮೋರೆ (50) ಎಂಬವರಿಗೆ ಈ ಶಿಕ್ಷೆಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಮಾಡಿದ ತಪ್ಪಿಗೆ ಅಂಗನವಾಡಿ ಸಹಾಯಕಿಗೆ ಘನಘೋರ ಶಿಕ್ಷೆಯಾಗಿದ್ದು, ಮಕ್ಕಳು ಅಂಗನವಾಡಿ ‌ಪಕ್ಕದಲ್ಲಿದ್ದ ಹೂ ಕಿತ್ತರೆಂಬ ಕಾರಣಕ್ಕೆ ಮನೆ ಮಾಲೀಕ ಅಂಗನವಾಡಿ ಸಹಾಯಕಿ ‌ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಬೈದು ಅಮಾನವೀಯವಾಗಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ

Advertisement

Udayavani is now on Telegram. Click here to join our channel and stay updated with the latest news.

Next