Advertisement

ಬೆಳಗಾವಿ:  ಕಬ್ಬಿನ ಬಾಕಿ ಬಿಲ್ ಪಾವತಿಗೆ ಜಿಲ್ಲಾಧಿಕಾರಿ ಸೂಚನೆ

05:51 PM May 28, 2021 | Team Udayavani |

ಬೆಳಗಾವಿ: 2020-21ನೇ ಸಕ್ಕರೆ ಹಂಗಾಮಿಗೆ ಕಬ್ಬು ಪೂರೈಸಿದ ರೈತರಿಗೆ ಬಾಕಿ ಬಿಲ್ಲನ್ನು ತಕ್ಷಣವೇ ಪಾವತಿಸಬೇಕು ಎಂದು ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಬ್ಬು ಸರಬರಾಜು ಮಾಡಿದ ರೈತರಿಗೆ ಕಬ್ಬು ನಿಯಂತ್ರಣ ಅಧಿನಿಯಮ-1966 ರಂತೆ ಕಬ್ಬು ಸರಬರಾಜು ಮಾಡಿದ 14 ದಿನದೊಳಗಾಗಿ ಮೊತ್ತ ಪಾವತಿಸಬೆಕೇಂಬ ನಿಯಮವಿದೆ. ಆದರೆ ಆಯುಕ್ತರು ಬಿಡುಗಡೆ ಮಾಡಿರುವ ವರದಿಯಂತೆ ಇನ್ನೂ ಕೆಲವು ಕಾರ್ಖಾನೆಯವರು ಪ್ರತಿಶತ 90 ಕ್ಕಿಂತ ಕಡಿಮೆ ಮೊತ್ತ ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬಾಕಿ ಉಳಿದಿರುವ ಕಬ್ಬಿನ ಬಿಲ್ಲನ್ನು ಮೇ-2021 ರ ಅಂತ್ಯದೊಳಗೆ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬಾಕಿ‌ ಬಿಲ್ ಪಾವತಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ಒಂದು ವೇಳೆ ವರದಿ ಸಲ್ಲಿಸಲು ತಪ್ಪಿದ್ದಲ್ಲಿ ಕಬ್ಬು ನಿಯಂತ್ರಣ ಅಧಿನಿಯಮ-1966 ರಡಿ ಶಿಸ್ತು ಕ್ರಮ ಜರುಗಿಸಲು ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರಿಗೆ ಶಿಪಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next