Advertisement

Belagavi; ಚುನಾವಣೆ ಬಳಿಕ ಡಬಲ್ ಇಂಜಿನ್ ಸರ್ಕಾರ ಬರಲಿದೆ: ರಮೇಶ್ ಜಾರಕಿಹೊಳಿ

04:13 PM Apr 13, 2024 | Team Udayavani |

ಬೆಳಗಾವಿ: ಲೋಕಸಭಾ ಚುನಾವಣೆ ನಂತರ ಆದಷ್ಟು ಬೇಗ ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಬರಲಿದೆ ಎಂದು ಬೆಳಗಾವಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಈಗಿನ ಸಿಂಗಲ್ ಇಂಜಿನ್ ಸರಕಾರ ಕೆಡವಿ ಡಬಲ್ ಇಂಜಿನ್ ಸರಕಾರ ತರೋಣ. ಅದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದರು.

ಲೋಕಸಭಾ ಚುನಾವಣೆ ನಂತರ ಈ ಸರಕಾರದ ಎಲ್ಲ ಗ್ಯಾರಂಟಿ ಯೋಜನೆಗಳು ಬಂದಾಗುತ್ತವೆ. ಕರೆಂಟ್ ಹೋಗುತ್ತದೆ. 2000 ರೂ ಬಂದಾಗುತ್ತದೆ. ಬಸ್ ಪಾಸ್ ಹೋಗುತ್ತದೆ. ಈ ಎಲ್ಲ ಗ್ಯಾರಂಟಿಗಳು ತಾತ್ಕಾಲಿಕ. ಇಂತಹ ಸುಳ್ಳು ಪ್ರಚಾರಕ್ಕೆ ಬಲಿಯಾಗಬೇಡಿ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜನರಿಗೆ ಮೋಸ ಮಾಡುತ್ತಿರುವ ಈ ಸರಕಾರ ನಂಬಬೇಡಿ. ಶಾಶ್ವತ ಹಾಗೂ ಅಭಿವೃದ್ಧಿ ಪರ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರಕಾರವನ್ನು ಬೆಂಬಲಿಸಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next