Advertisement

ಅಥಣಿ ತಾಲೂಕಿನಲ್ಲಿ ಕಂಪಿಸಿದ ಭೂಮಿ: ಬೆಚ್ಚಿ ಬಿದ್ದ ಜನ

09:55 AM Jul 09, 2022 | Team Udayavani |

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ‌ ಸುರಿಯುತ್ತಿರುವ ಬೆನ್ನಲ್ಲೇ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಲಘು ಭೂಕಂಪವಾಗಿದೆ.‌

Advertisement

ಶನಿವಾರ ಬೆಳಗ್ಗೆ 6:45ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಸುಮಾರು ಐದಾರು ಸೆಕೆಂಡ್ ಭೂಮಿ ಕಂಪನವಾಗಿದೆ.

ಧಾರಾಕಾರ‌ ಮಳೆ ಸುರಿಯುತ್ತಿರುವುದರ ಜತೆಗೆ ಲಘು ಭೂಕಂಪನ ಆಗಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಡಿಎಸ್ ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next