Advertisement
ನಗರದ ಮೂರನೇ ರೈಲ್ವೆ ಗೇಟ್ ಬಳಿ 27.28 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ರವಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಾಜಪೇಯಿ ಅವರು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿ ಸಂಪರ್ಕ ಕೊಂಡಿ ಬೆಸೆದರು. ಈಗ ಮೋದಿ ಆಡಳಿತದಲ್ಲೂ ಸೇತುವೆಗಳು ನಿರ್ಮಾಣವಾಗುತ್ತಿವೆ. ಇವು ದೇಶದ ಪ್ರಗತಿಯ ಸಂಕೇತ ಎಂದರು.
Related Articles
Advertisement
ಅರಣ್ಯ ಹಾಗೂ ಪರಿಸರ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ರಾಜಧಾನಿ ಬೆಂಗಳೂರಿಗೆ ಪರ್ಯಾಯವಾಗಿ ಬೆಳಗಾವಿಯನ್ನು ಅಭಿವೃದ್ಧಿ ದಿಕ್ಕಿನತ್ತ ಕೊಂಡೊಯ್ಯಬೇಕಾಗಿದೆ. ನಗರದ ಅಭಿವೃದ್ಧಿಗೆ ಪಕ್ಷಭೇದ ಮರೆತು ಎಲ್ಲರೂ ಶ್ರಮಿಲಾಗುವುದು. ನಮ್ಮ ನಗರ ಸುಂದರ ಹಾಗೂ ಅಭಿವೃದ್ಧಿಯಾಗಿ ಬೆಳೆಯಲಿ ಎಂಬ ಉದ್ಧೇಶ ಎಲ್ಲರದ್ದಾಗಿದೆ. ಈ ದಿಸೆಯಲ್ಲಿ ರಾಜಕೀಯ ಸಮನ್ವಯತೆ ಕಾಯ್ದುಕೊಂಡು ಮುನ್ನಡೆಯಲಾಗುವುದು ಎಂದರು.
ನಗರದಲ್ಲಿ 4 ಮೂರು ರೈಲ್ವೆ ಮೇಲ್ಸೇತುವೆಗಳ ಪೈಕಿ ಈಗಾಗಲೇ ಮೂರು ಮುಗಿದಿದ್ದು, ಇನ್ನು ಮೂರನೇ ರೈಲ್ವೆ ಮೇಲ್ಸೇತುವೆ ಕೆಲವೇ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದಕ್ಕೆಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವಿದೆ. ನಂತರದಲ್ಲಿ ಒಂದನೇ ಹಾಗೂ ಎರಡನೇ ರೈಲ್ವೆ ಗೇಟ್ ಬಳಿಯೂ ಶೀಘ್ರದಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭಿಸಲಾಗುವುದು ಎಂದರು.
ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ದಕ್ಷಿಣ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟದ ಕಾಂಕ್ರೀಟ್ ರಸ್ತೆಗಳನ್ನಾಗಿ ನಿರ್ಮಿಸ ಲಾಗುವುದು. ಕಾಮಗಾರಿ ಮುಂದಿನ ತಿಂಗಳಿಂದ ಆರಂಭವಾಗಲಿದೆ. ಕಾರ್ಗೋ ಹಾಗೂ ಐಟಿ ಪಾರ್ಕ್ ಸ್ಥಾಪನೆ ಮಾಡುವ ಬೆಳಗಾವಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪಮೇಯರ್ ಮಧುಶ್ರೀ ಪೂಜಾರಿ, ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ, ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅಜಯಕುಮಾರಸಿಂಗ್, ಪಾಲಿಕೆ ಆಯುಕ್ತ ಶಶಿಧರ ಕುರೇರ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಇದ್ದರು.
ಚನ್ನಮ್ಮ ಎಕ್ಸಪ್ರಸ್ಗೆ ಇನ್ನೂ 4 ಬೋಗಿ ಅಳವಡಿಸಿರಾಣಿ ಚನ್ನಮ್ಮ ಎಕ್ಸಪ್ರಸ್ ರೈಲಿನಲ್ಲಿ ಅತಿ ಹೆಚ್ಚು ಪ್ರಯಾಣಿಕರು ಪ್ರವಾಸ ಮಾಡುತ್ತಾರೆ. ಈಗಾಗಲೇ 20 ಬೋಗಿಗಳಿವೆ. ನಿತ್ಯವೂ ಬೆಂಗಳೂರುವರೆಗೆ ಈ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಒತ್ತಡ ತಗ್ಗಿಸಲು ಇನ್ನೂ ಹೆಚ್ಚುವರಿಯಾಗಿ 4 ಬೋಗಿಗಳನ್ನು ಅಳವಡಿಸಬೇಕು ಎಂದು ವೇದಿಕೆಯಲ್ಲಿದ್ದ ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅಜಯಕುಮಾರಸಿಂಗ್ ಅವರಿಗೆ ಸಂಸದ ಸುರೇಶ ಅಂಗಡಿ ಮನವಿ ಮಾಡಿದರು. ಡಾ| ಕೋರೆ ಬಾರದ್ದಕ್ಕೆ ಅಂಗಡಿ ಸ್ಪಷ್ಟನೆ
ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಗೈರು ಉಳಿದಿರುವ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಸದ ಸುರೇಶ ಅಂಗಡಿ, ಕೋರೆ ಅವರು ಬೇರೆ ಕಾರ್ಯಕ್ರಮ ನಿಮಿತ್ತ ಸಮಾರಂಭದಲ್ಲಿ ಭಾಗವಹಿಸಿಲ್ಲ. ಈ ಬಗ್ಗೆ ನನಗೆ ಮೊದಲೇ ಅವರು ತಿಳಿಸಿದ್ದಾರೆ. ಅಂಗಡಿ ಅವರೊಂದಿಗೆ ಮುನಿಸಿಕೊಂಡು ಕೋರೆ ಭಾಗವಹಿಸಿಲ್ಲ ಎಂಬುದಾಗಿ ಮಾಧ್ಯಮದವರು ಭಾವಿಸಬಾರದು. ಸಾಧ್ಯವಾದರೆ ಕೋರೆ ಅವರನ್ನೂ ನೀವು ಕೇಳಬಹುದು ಎಂದರು.