Advertisement

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

02:03 PM Dec 06, 2022 | Team Udayavani |

ಬೆಳಗಾವಿ: ಬೆಳಗಾವಿಯಲ್ಲಿ ಬಹಿರಂಗ ಸಭೆ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದತ್ತ ಮುನ್ನುಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿರುವ ಮಹಾರಾಷ್ಟ್ರ ನೋಂದಣಿಯ 6ಕ್ಕೂ ಹೆಚ್ಚು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಪುಣೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಹಾರಾಷ್ಟ್ರ ನೋಂದಣಿ ವಾಹನದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಈ ವೇಳೆ ಲಾರಿ ಪುಡಿಪುಡಿಯಾಗಿದೆ. ಮಹಾರಾಷ್ಟ್ರ ನೋಂದಣಿಯ ಅನೇಕ ವಾಹನಗಳನ್ನು ತೊಡೆದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಹಾರಾಷ್ಟ್ರ ನೋಂದಣಿ ಇರುವ ಫಲಕದ ಮೇಲೂ ಕಪ್ಪುಮಸಿ ಬಳಿದು ಆಕ್ರೋಶ ಹೊರಹಾಕಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಬೆಳಗಾವಿಯತ್ತ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

https://youtu.be/Tos8Motvo7c

Advertisement

Udayavani is now on Telegram. Click here to join our channel and stay updated with the latest news.

Next