Advertisement

ಸತ್ತನೆಂದು ಮಣ್ಣಾದವ ಊಟಕ್ಕಾಗಿ ಕರೆ ಮಾಡಿದ! ​

05:29 PM May 04, 2021 | Team Udayavani |

ಬೆಳಗಾವಿ: ಕೊರೊನಾ ಸೋಂಕಿನಿಂದ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮೃತಪಟ್ಟಿದ್ದಾನೆ ಎಂದು ಹೇಳಿ ಅವರ ಕುಟುಂಬದವರಿಗೆ ಬೇರೆ ಮೃತದೇಹ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ ಘಟನೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.

Advertisement

ಮೋಳೆ ಗ್ರಾಮದ ಪಾಯಪ್ಪ ಸತ್ಯಪ್ಪ ಹಳ್ಳೋಳ್ಳಿ (82) ಸತ್ತು ಬದುಕಿದ ವ್ಯಕ್ತಿ! ಈ ವೃದ್ಧ ಕೆಲ ಹೊತ್ತಿನ ನಂತರ ಮನೆಯವರಿಗೆ ಕರೆ ಮಾಡಿ “ಇನ್ನೂ ಏಕೆ ಊಟ ತಂದು ಕೊಟ್ಟಿಲ್ಲ’ ಎಂದು ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಅಚಾತುರ್ಯ ಬೆಳಕಿಗೆ ಬಂದಿದೆ.

ಸೋಮವಾರ ಬೆಳಗ್ಗೆ ಮೋಳೆ ಗ್ರಾಮಕ್ಕೆ ಆಗಮಿಸಿದ ಬೆಳಗಾವಿ ಖಾಸಗಿ ಆಸ್ಪತ್ರೆ ಸಿಬ್ಬಂದಿ, ತಹಶೀಲ್ದಾರ್‌ ಪ್ರಮೀಳಾ ದೇಶಪಾಂಡೆ ಹಾಗೂ ಕಾಗವಾಡ ಪಿಐ ಹಣಮಂತ ಧರ್ಮಟ್ಟಿ, ಉಪ ತಹಶೀಲ್ದಾರ್‌ ಅಣ್ಣಪ್ಪ ಕೋರೆ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ಮಾಡಿದ್ದ ಮೃತದೇಹವನ್ನು ಹೊರ ತೆಗೆಯಲಾಗಿದೆ.

ಗೋಕಾಕ ತಾಲೂಕಿನ ಗ್ರಾಮವೊಂದರ ಕುಟುಂಬದವರಿಗೆ ಸೇರಿದ ವ್ಯಕ್ತಿಯ ಈ ಮೃತದೇಹವನ್ನು ಹಸ್ತಾಂತರಿಸಲಾಗಿದೆ ಎಂಬುದು ತಿಳಿದು ಬಂದಿದೆ.

ಏನಿದು ಘಟನೆ?:

Advertisement

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ವೃದ್ಧ ಪಾಯಪ್ಪ ಚಿಕಿತ್ಸೆ ಪಡೆಯುತ್ತಿದ್ದ. ಮೇ 1ರಂದು ಈ ವೃದ್ಧ ಮೃತಪಟ್ಟಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಆಗ ಕುಟುಂಬದ ನಾಲ್ವರು ಪಿಪಿಇ ಕಿಟ್‌ ಧರಿಸಿ ಮೃತ ದೇಹವನ್ನು ತಂದು ಪ್ಯಾಕ್‌ ಓಪನ್‌ ಮಾಡದೇ ತಮ್ಮ ಹೊಲದಲ್ಲಿ ಕೋವಿಡ್‌ ನಿಯಮವಾಳಿ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಮೃತದೇಹದ ಮುಖ ನೋಡದೆ ವಿಧಿವಿಧಾನ ನಡೆಸಿದ್ದಾರೆ. ನಂತರ ಒಂದು ತಾಸಿನ ಬಳಿಕ ಆಸ್ಪತ್ರೆಯ ನರ್ಸ್‌ ಮೊಬೈಲ್‌ ಪಡೆದು ವೃದ್ಧ ಪಾಯಪ್ಪ ಮನೆಯವರಿಗೆ ಕರೆ ಮಾಡಿ, “ನನಗೆ ಊಟ ಏಕೆ ತಂದು ಕೊಟ್ಟಿಲ್ಲ’ ಎಂದು ಕೇಳಿದಾಗ ಮನೆಯವರು ಹೌಹಾರಿದ್ದಾರೆ. ದಿಗ್ಭ್ರಮೆಗೊಂಡು ಆಸ್ಪತ್ರೆಯವರನ್ನು ವಿಚಾರಿಸಿದಾಗ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿ¨

Advertisement

Udayavani is now on Telegram. Click here to join our channel and stay updated with the latest news.

Next