Advertisement

Belagavi; ಕರ್ನಾಟಕವು ಭಯೋತ್ಪಾದಕರ ಅಡ್ಡೆಯಾಗಿದೆ: ಜೆ.ಪಿ ನಡ್ಡಾ ಆರೋಪ

02:46 PM Mar 05, 2024 | Team Udayavani |

ಬೆಳಗಾವಿ: ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡ್ಡೆಯಾಗಿದೆ ಎಂದು ಬಿಜೆಪಿ ಅದ್ಯಕ್ಷ ಜೆ.ಪಿ ನಡ್ಡಾ ನೇರ ಆರೋಪ ಮಾಡಿದರು.

Advertisement

ಚಿಕ್ಕೋಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಡ್ಡಾ, ಕರ್ನಾಟಕದ ಶಕ್ತಿ ಕೇಂದ್ರದಲ್ಲಿ ಬಾಂಬ್ ದಾಳಿ ಮಾಡಲು ಸಂಚು ರೂಪಿಸುವ ಭಯೋತ್ಪಾದಕರಿಗೆ ಕಾಂಗ್ರೆಸ್ ಸರಕಾರ ಆಶ್ರಯ ನೀಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆದರು.

ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನ ವಹಿಸಿರುವ ಉದ್ದೇಶ ಏನು ಸ್ಪಷ್ಟಪಡಿಸಬೇಕು. ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಸರಕಾರವು ಪಿಎಫ್ಐ ಬ್ಯಾನ್ ಮಾಡಿದೆ. ಆದರೆ ಕಾಂಗ್ರೆಸ್ ಸರಕಾರ ಪಿಎಫ್ಐ ಮೇಲಿನ ಕೇಸ್ ವಾಪಸ್ ಪಡೆಯುತ್ತಿದೆ. ಕಾಂಗ್ರೆಸ್ ಮುಖಂಡರಿಗೆ ಭಾರತದ ಮೇಲೆ ಪ್ರೀತಿ ಇದ್ದರೆ ಪಾಕಿಸ್ತಾನ ಜೈ ಎಂದವರ ಮೇಲೆ ಸೂಕ್ತ ಕ್ರಮ ಜರುಗಿಸಲಿ ಎಂದು ನಡ್ಡಾ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next