Advertisement

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

03:53 PM Sep 20, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌. ಕಾಂಗ್ರೆಸ್ ಸರಕಾರ ಬಂದ ನಂತರ ಕೋಮುಗಲಭೆಗಳು ಹೆಚ್ಚುತ್ತಿವೆ ಎಂದು ಬೆಳಗಾವಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ (MP Jagadish Shettar) ಹೇಳಿದರು.

Advertisement

ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಪಾಲಿಸ್ತೈನ್ ಧ್ವಜಗಳು ಹಾರಾಡುತ್ತಿವೆ. ಗಲಭೆಗೆ ಕಾರಣರಾದವರು ಮತ್ತು ಕಲ್ಲುತೂರಾಟ ಮಾಡಿದವರ ರಕ್ಷಣೆಯನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು.

ತಿರುಪತಿ ಲಾಡುವಿನಲ್ಲಿ ಪ್ರಾಣಿಕೊಬ್ಬು ಮಿಶ್ರಣ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಬಹಳ ಗಂಭೀರವಾದ ಆರೋಪ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next