Advertisement

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

02:24 PM Mar 19, 2024 | Team Udayavani |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಇನ್ನೂ ಮುಂದುವರಿದಿದೆ.

Advertisement

ಈ ನಡುವೆ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ನಾಯಕರು ಮಂಗಳವಾರ ಬೆಂಗಳೂರಿಗೆ ತೆರಳಿ ಪಕ್ಷದ ರಾಜ್ಯ ನಾಯಕರ ಜೊತೆಗೆ ಅಭ್ಯರ್ಥಿ ಆಯ್ಕೆಯ ಕುರಿತು ಚರ್ಚೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಜಗದೀಶ್ ಶೆಟ್ಟರ್ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಜಿಲ್ಲೆಯ ಮುಖಂಡರ ನಿಯೋಗ ರಾಜ್ಯ ನಾಯಕರಿಗೆ ಮನವಿ ಮಾಡಿಕೊಂಡಿದೆ.

ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಿದರೆ ಅದರಿಂದ ಕಾಂಗ್ರೆಸ್ ಗೆ ಅನುಕೂಲವಾಗಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖಂಡರು ಹೇಳಿದ್ದಾರೆ.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಮಾಜಿ ಶಾಸಕರಾದ ಸಂಜಯ ಪಾಟೀಲ, ವಿಶ್ವನಾಥ ಪಾಟೀಲ, ಜಗದೀಶ್ ಮೆಟಗುಡ್, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಧನಂಜಯ ಜಾಧವ ಮತ್ತು ರಾಜೇಂದ್ರ ಹರಕುಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ: ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next