Advertisement

Belagavi; ಕಾರಾಗೃಹದಲ್ಲಿ ಕೈದಿಗಳ ಹೊಡೆದಾಟ: ಸಿಬಂದಿಗಳಿಬ್ಬರು ಅಮಾನತು

08:48 PM Aug 10, 2023 | Team Udayavani |

ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರು ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಉತ್ತರ ವಲಯದ ಕಾರಾಗೃಹಗಳ ಉಪಮಹಾನಿರೀಕ್ಷಕ ಟಿ.ಪಿ.ಶೇಷ ಆದೇಶ ಹೊರಡಿಸಿದ್ದಾರೆ.

Advertisement

ಹಿರಿಯ ವೀಕ್ಷಕ ಬಿ.ಎಲ್‌.ಮೆಳವಂಕಿ ಹಾಗೂ ವೀಕ್ಷಕರಾದ ವಿ.ಟಿ.ವಾಘಮೋರೆ ಅಮಾನತುಗೊಂಡ ಸಿಬ್ಬಂದಿಗಳು. ಗಲಾಟೆ ನಡೆಯದಂತೆ ನೋಡಿಕೊಳ್ಳುವಲ್ಲಿ ಇಬ್ಬರೂ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊಲೆ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಸಾಯಿಕುಮಾರ್‌ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಎದುರಿಸುತ್ತಿರುವ ಶಂಕರಪ್ಪ ಕೊರವರ ಮಧ್ಯೆ ಜುಲೈ 29ರಂದು ಗಲಾಟೆ ನಡೆದಿತ್ತು.

ಮಂಡ್ಯ ಮೂಲದ ಸಾಯಿಕುಮಾರ್‌ಗೆ ಶಂಕರಪ್ಪ ಬಲವಾಗಿ ಹೊಡೆದಿದ್ದ. ಅಷ್ಟೇಅಲ್ಲ ಸ್ಕ್ರೂಡ್ರೈವರ್‌ನಿಂದ ಎದೆಗೆ ಐದು ಬಾರಿ ಚುಚ್ಚಿದ್ದ.ಇದರಿಂದ ಸಾಯಿಕುಮಾರ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಮರು ಹೊಡೆತದಿಂದ ಶಂಕರಪ್ಪ ಕೂಡ ಗಾಯಗೊಂಡಿದ್ದ. ಇಬ್ಬರೂ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next