Advertisement

Belagavi; ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ

05:38 PM Feb 19, 2024 | Team Udayavani |

ಬೆಳಗಾವಿ: ಕೇಂದ್ರದ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು ಮಾಡಲಾಗಿದೆ ಎಂದು ಬೆಳಗಾವಿ ಸಂಸದೆ ಮಂಗಲಾ ಸುರೇಶ್ ಅಂಗಡಿ ಹೇಳಿದರು.

Advertisement

ದೇಶದಾದ್ಯಂತ ಒಟ್ಟು 78 ವಿಶ್ವವಿದ್ಯಾಲಯಗಳನ್ನು ಈ ಯೋಜನೆಯಡಿ ಆಯ್ಕೆಯಾಗಿದ್ದು ಅದರಲ್ಲಿ ರಾಣಿ ಚೆನ್ನಮ್ಮ ವಿವಿ ಸಹ ಒಂದಾಗಿದೆ. ಫೆ.20ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಅನುದಾನವನ್ನು ರಾಣಿ ಚೆನ್ನಮ್ಮ ವಿವಿಯು ಸಂಶೋಧನೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಕೆ ಮಾಡಬಹುದಾಗಿದೆ ಎಂದು ಸಂಸದೆ ಮಂಗಲಾ ಅಂಗಡಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next