Advertisement

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

06:29 PM Oct 22, 2024 | Team Udayavani |

ಬೆಳಗಾವಿ: ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ ಆಗಿದೆ. ಎಲ್ಲ ಆರೋಪಿಗಳಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Advertisement

ಮಂಜುನಾಥ ತೇರ್ಕಲ್ ಎಂಬ ಆರೋಪಿಯನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಲಾಗಿದೆ. ಎಲ್ಲ ಆರೋಪಿಗಳನ್ನು ಮಂಗಳವಾರ ನಗರದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಲ್ಲರಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಆದೇಶ ಹೊರಡಿಸಿದರು.

ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪತ್ನಿ ಉಮಾ ಪದ್ಮಣ್ಣವರ, ಆರೋಪಿಗಳಾದ ಶೋಭಿತಗೌಡ, ಪವನ್ ಹಾಗೂ ಮಂಜುನಾಥನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next