Advertisement

Belagavi: ರಾಜ್ಯ ಗೃಹ ಇಲಾಖೆಯು ಎಸ್ ಡಿಪಿಐ ಕಪಿಮುಷ್ಠಿಯಲ್ಲಿ ಸಿಲುಕಿದೆ: ಸುನೀಲ್‌ ಕುಮಾರ್‌

03:53 PM Sep 13, 2024 | Team Udayavani |

ಬೆಳಗಾವಿ: ನಾಗಮಂಗಲ, ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಘಟನೆಗಳನ್ನು ನೋಡಿದರೆ ಗೃಹ ಇಲಾಖೆ ಎಸ್ ಡಿಪಿಐ ಕಪಿಮುಷ್ಠಿಯಲ್ಲಿ ಸಿಲುಕಿರುವ ಅನುಮಾನ ಮೂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ವಿ.ಸುನೀಲ್ ಕುಮಾರ್ (V Sunil Kumar) ಗಂಭೀರ ಆರೋಪ ಮಾಡಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಇನ್ನೊಂದು ತಾಲಿಬಾನ್ ಅಥವಾ ಬಾಂಗ್ಲಾ ಆಗಲು ಬಿಡಬೇಡಿ. ನಾಗಮಂಗಲ ಘಟನೆಯ ನಂತರ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಹಿಂದೂ ಸಮಾಜದ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗದ ಸನ್ನಿವೇಶ ಕಾಣುತ್ತಿದೆ. ಇದು ಪೂರ್ವ ನಿಯೋಜಿತ ಕೃತ್ಯ. ಆದರೆ ಇದು ಸಣ್ಣ ಘಟನೆ ಎನ್ನುವ ಮೂಲಕ ಗೃಹ ಸಚಿವರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಇದುವರೆಗೆ ಕರ್ನಾಟಕದ ಯಾವುದೇ ಭಾಗದಲ್ಲಿ ಈದ್ ಮಿಲಾದ್ ಮೆರವಣಿಗೆ ಮೇಲೆ ಕಲ್ಲು ತೂರಾಟವಾಗಿಲ್ಲ. ಮುಂದೆಯೂ ಆಗಬಾರದು. ಆದರೆ ಸರಕಾರದ ಮೃದು ಧೋರಣೆಯ ಪರಿಣಾಮ ಮತಾಂಧರಿಗೆ ಈ ರೀತಿಯ ಧೈರ್ಯ ಬಂದಿದೆ.  ನಾಗಮಂಗಲ ಘಟನೆಯಲ್ಲಿ ಹಾನಿಗೊಳಗಾದ ಅಂಗಡಿಗಳಿಗೆ ಕೂಡಲೇ ಪರಿಹಾರ ಕೊಡಬೇಕು. ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಸುನೀಲ್‌ ಕುಮಾರ್ ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಆರ್ಥಿಕತೆ ಕುಸಿದು ಬಿದ್ದಿದೆ. ಈಗ ಹಲವಾರು ಯೋಜನೆಗಳಿಗೆ ಕತ್ತರಿ ಹಾಕುವ ಪ್ರಯತ್ನ ನಡೆದಿದೆ. ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸರಕಾರಕ್ಕೆ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next