Advertisement

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

10:43 PM May 23, 2024 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಗುಡುಗು-ಸಿಡಿಲು ಮಿಶ್ರಿತ ಧಾರಾಕಾರ ಮಳೆಯಿಂದ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟ‌ನೆ ನಡೆದಿದೆ.

Advertisement

ರಾಯಭಾಗ ಪಟ್ಟಣದ ಹೊರ ವಲಯದ ಜಮೀನಿನಲ್ಲಿ ಗುರುವಾರ ಕೃಷಿ ಕೆಲಸದಲ್ಲಿ ತೊಡಗಿದ್ದ ಶೋಭಾ ಕೃಷ್ಣಾ ಕುಲಗುಡೆ(43) ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲಪ್ಪ ಶಂಕರ ಮೇತ್ರಿ(43), ಭಾರತಿ ಕೆಂಪಣ್ಣ ಕಮತೆ(32), ಬಾಬುರಾವ ಅಶೋಕ ಚವ್ಹಾಣ(30) ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಯಭಾಗ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.‌ಸ್ಥಳಕ್ಕೆ‌ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.‌

ಹುಕ್ಕೇರಿ ತಾಲೂಕು ಸೇರಿದಂತೆ ಸಂಕೇಶ್ವರ ಭಾಗದಲ್ಲಿ ಗುರುವಾರ ಸಂಜೆ ಧಾರಾಕಾರ ಮಳೆ ಸುರಿದಿದೆ ಜೋರಾದ ಬಿರುಗಳಿಂದ ಹಲವು ಗಿಡ-ಮರಗಳು ಧರೆಗುರುಳಿವೆ ರವಸದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ನಾಲ್ಕರರಲ್ಲಿ ನೀರು ನಿಂತು ಹೊಳೆಯಂತೆ ಆಗಿತ್ತು. ಜೋರಾದ ಬಿರುಗಾಳಿಯಿಂದಾಗಿ ವಾಹನಗಳು ಮುಂದಕ್ಕೆ ಸಾಗದೇ ಅಲ್ಲಿಯೇ ನಿಂತಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next