Advertisement

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

12:37 PM Apr 23, 2024 | Team Udayavani |

ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜೈಲಿನಿಂದ ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿರುವ ವಿಡಿಯೋ ವೈರಲ್‌ ಆಗಿದೆ.

Advertisement

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಸಪ್ಪ ನಾಯಕ್ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವ ವೇಳೆ ಹೂಹಾರ ಹಾಕಿ ಸ್ವಾಗತ ಮಾಡಿದ್ದಾರೆ.

ಆರೋಪಿ ಜೈಲಿನಿಂದ ಹೊರ ಬಂದಾಗ ಹೂಹಾರವನ್ನು ಹಾಕಿ, ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಆರೋಪಿಗೆ ಹೂಹಾರ ಹಾಕಿ ವಿವಿಧ ಹಾಡುಗಳನ್ನು ಎಡಿಟ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.  ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಪಟಾಕಿ ಹಾಗೂ ಸಿಹಿ ಹಂಚಿ ಆರೋಪಿಗಳ ಬಿಡುಗಡೆಯನ್ನು ಸಂಭ್ರಮವಾಗಿ ಆಚರಿಸಲಾಗಿದೆ.

ಏನಿದು ಘಟನೆ: 2023ರ ಡಿಸೆಂಬರ್​​ 10 ರಂದು ವಂಟಮೂರಿ ಗ್ರಾಮದಲ್ಲಿ ಪ್ರೀತಿಯ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 13 ಜನ ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಸಿದ್ದರು.

Advertisement

ಹೈಕೋರ್ಟ್‌ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಹೀಗಾಗಿ ಆರೋಪಿಗಳು ಸೋಮವಾರ (ಏ.22) ರಾತ್ರಿ ಜೈಲಿನಿಂದ ಬಿಡುಗಡೆಯಾದರು.

Advertisement

Udayavani is now on Telegram. Click here to join our channel and stay updated with the latest news.

Next