Advertisement

Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

10:15 PM Jun 29, 2024 | Team Udayavani |

ಬೆಳಗಾವಿ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಶಂಕಿತ ಡೆಂಗ್ಯೂದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಶನಿವಾರ ವರದಿಯಾಗಿದೆ.

Advertisement

ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಪ್ರಸಾದ ಮುಚ್ಚಂಡಿಕರ (28) ಮೃತ ದುರ್ದೈವಿ ಯುವಕ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪ್ರಸಾದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ರಾಜಯದೆಲ್ಲೆಡೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಿದ್ದು 5 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next