Advertisement

ಬೆಳಮಗಿ ಮಹಿಳಾ ಸತ್ಯಾಗ್ರಹಕ್ಕೆ ಶತದಿನ

04:22 PM Aug 04, 2022 | Team Udayavani |

ಆಳಂದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಮಗಿ ಗ್ರಾಮ ಪಂಚಾಯಿತಿ ಎದುರು ಸದಸ್ಯೆ ಪಾರ್ವತಿ ಅಂಬರಾಯ ಕೈಗೊಂಡ ಧರಣಿ ಸತ್ಯಾಗ್ರಹ 100ನೇ ದಿನ ಪೂರೈಸಿ ಗುರುವಾರಕ್ಕೆ 101ನೇ ದಿನಕ್ಕೆ ಕಾಲಿಟ್ಟಿದೆ.

Advertisement

ಅಂಗನವಾಡಿಗಳಲ್ಲಿ ಅವ್ಯವಹಾರ ಸರಿಪಡಿಸುವಂತೆ, ಸಿಡಿಪಿಒ ವಿರುದ್ಧ ಕ್ರಮ ಜರುಗಿಸಬೇಕು. ಅಕ್ರಮ ಮದ್ಯ ಮಾರಾಟ ತಡೆಯಬೇಕು. ದಲಿತ ಬಡಾವಣೆಯ ಶುದ್ಧ ನೀರಿನ ಘಟಕ ದುರಸ್ತಿಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅವರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ತಾಪಂ ಇಒ ವಿಲಾಸರಾಜ್‌ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ತಮ್ಮ ವ್ಯಾಪ್ತಿಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ ಇನ್ನೂವರೆಗೂ ಯಾವುದೇ ಬೇಡಿಕೆ ಈಡೇರಿಸಿಲ್ಲ ಎಂದು ಧರಣಿ ಮುಂದುವರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next