Advertisement

Belapu: ಅಕ್ರಮ ಗೋಸಾಗಾಟ;ಆರೋಪಿಗಳು ಪರಾರಿ

04:28 PM Aug 20, 2023 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳಪು ಇಂಡಸ್ಟ್ರಿಯಲ್‌ ಏರಿಯಾದ ಬಳಿ ದನ ಕಳವು ಮಾಡಿ ಎಳೆದುಕೊಂಡು ಹೋಗುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರನ್ನು ಕಂಡು 2 ದನಗಳನ್ನು ಬಿಟ್ಟು ಪರಾರಿಯಾದ ಘಟನೆ ಶನಿವಾರ ನಡೆದಿದೆ. ಆರೋಪಿಗಳು ಬೆಳಪು ಗ್ರಾಮದ ಮಹಮ್ಮದ್‌ ರಫೀಕ್‌ ಮತ್ತು ಸಂಶುದ್ದೀನ್‌ ಎಂದು ಪೊಲೀಸರು ಗುರುತಿಸಿದ್ದಾರೆ.

Advertisement

ಶಿರ್ವ ಪೊಲೀಸ್‌ ಠಾಣಾಧಿಕಾರಿ ಶಕ್ತಿವೇಲು ಅವರು ಶನಿವಾರ ಮಧ್ಯಾಹ್ನ ಬೆಳಪು ಇಂಡಸ್ಟ್ರಿಯಲ್‌ ಏರಿಯಾದ ಬಳಿ ಕುತ್ತಿಗೆಗೆ ಹಗ್ಗ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದವರನ್ನು ಬೆನ್ನಟ್ಟಿದಾಗ ಅವರಿಬ್ಬರು ದನಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ದನಗಳನ್ನು ವಶಕ್ಕೆ ಪಡೆದ ಪೊಲೀಸರು ಅವರಿಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಮ್ಮದ್‌ ರಫೀಕ್‌ ಶಿರ್ವ ಪೊಲೀಸ್‌ ಠಾಣೆೆಯ ರೌಡಿ ಅಸಾಮಿಯಾಗಿದ್ದು, ಸಂಶುದ್ದೀನ್‌ 2022ರಲ್ಲಿ ಶಿರ್ವ ಠಾಣೆಯಲ್ಲಿ ದಾಖಲಾದ ಗೋಹತ್ಯಾ ಪ್ರಕರಣದ ಆರೋಪಿಯಾಗಿದ್ದಾನೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next