Advertisement

ಪತ್ನಿಯೊಂದಿಗೆ ಅಕ್ರಮ ಸಂಬಂಧ: ತೋಟದಲ್ಲಿ ವ್ಯಕ್ತಿಯ ಭೀಕರ ಕೊಲೆ!

10:52 AM Mar 11, 2021 | Team Udayavani |

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಗೌರಿಬಿದನೂರು ತಾಲ್ಲೂಕಿನ ಡಿ ಪಾಳ್ಯ ಹೋಬಳಿಯ ಬೆಳವಹಳ್ಳಿ ಗ್ರಾಮದ ವೆಂಕಟೇಶಪ್ಪ (47) ಕೊಲೆಗೀಡಾದ ವ್ಯಕ್ತಿ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೌರಿಬಿದನೂರು ತಾಲೂಕಿನ ಡಿಪಾಳ್ಯ ಹೋಬಳಿಯ ಚುಂಚದೇನಹಳ್ಳಿ ಗ್ರಾಮದ ಆರೋಪಿ ನರಸಿಂಹಪ್ಪನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಟ್ರಕ್ – ಸ್ಕಾರ್ಪಿಯೋ ವಾಹನದ ಮಧ್ಯೆ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ, ಮೂವರಿಗೆ ಗಾಯ

ಕೊಲೆಗೀಡಾದ ವೆಂಕಟೇಶಪ್ಪನು ಆರೋಪಿಯ ನರಸಿಂಹಪ್ಪನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ ಈ ವಿಚಾರ ತಿಳಿದ ತಕ್ಷಣ ಕುಪಿತಗೊಂಡ ನರಸಿಂಹಪ್ಪ ಚುಂಚದೇನಹಳ್ಳಿ ಸಮೀಪ ತೋಟವೊಂದರಲ್ಲಿ ವೆಂಕಟೇಶಪ್ಪನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಅವರ ಮಾರ್ಗದರ್ಶನದಲ್ಲಿ ಮಂಚೇನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಇದನ್ನೂ ಓದಿ: ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿದ ಎಂಟರ ಹರೆಯದ ಬಾಲಕ‌ ದಾರುಣ ಬಲಿ!

Advertisement

Udayavani is now on Telegram. Click here to join our channel and stay updated with the latest news.

Next