Advertisement

ಬೆಳಗಾವಿ: ರಸ್ತೆ ಕಾಮಗಾರಿ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು

09:52 AM May 28, 2019 | Team Udayavani |

ಬೆಳಗಾವಿ: ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ತಾಲೂಕಿನ ದೇಸೂರು ಬಳಿ ನಡೆದಿದೆ.

Advertisement

ಖಾನಾಪುರ-ಬೆಳಗಾವಿ ರಸ್ತೆ ಕಾಮಗಾರಿ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕರಾದ ದುರ್ಗೆಶ್ ಕುಮಾರ್(22ವರ್ಷ), ಅರ್ಜುನ್ ಸಿಂಗ್ (21ವರ್ಷ), ಸುಖಾನ್ ಎಂದು ಗುರುತಿಸಲಾಗಿದೆ.

ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಖಾನ್ ಎಂಬ ಕಾರ್ಮಿಕನನ್ನು ಜೆಸಿಬಿ ಮೂಲಕ ಮಣ್ಣು ಅಗೆದು ಶವವನ್ನು ಹೊರತೆಗೆಯಲಾಯಿತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next