Advertisement

ನೆರೆ ಸಂತ್ರಸ್ತರ ಮೊದಲ ಮನೆ ನಿರ್ಮಾಣಕ್ಕೆ ಸಿಎಂ ಅಡಿಗಲ್ಲು

11:13 AM Oct 05, 2019 | Naveen |

ಬೆಳಗಾವಿ: ಪ್ರವಾಹ ಸಂತ್ರಸ್ತರ ನೆರವಿಗೆ ಕೊನೆಗೂ ಧಾವಿಸಿರುವ ರಾಜ್ಯ ಸರ್ಕಾರ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂ. ಜಮಾ ಆಗುತ್ತಿದ್ದಂತೆ, ಮುಖ್ಯಮಂತ್ರಿಗಳು ರಾಜ್ಯದ ನಿರಾಶ್ರಿತರ ಮೊದಲ ಮನೆ ನಿರ್ಮಾಣಕ್ಕೆ ಸಾಂಕೇತಿಕವಾಗಿ ಅಡಿಗಲ್ಲು ನೆರವೇರಿಸುವ ಮೂಲಕ ಚಾಲನೆ ನೀಡಿದರು.

Advertisement

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಅನೇಕ ಮನೆಗಳು ಧರೆಗುರುಳಿವೆ. ಜಿಲ್ಲೆಯಲ್ಲಿಯೂ ಸಾವಿರಾರು ಮನೆಗಳು ಕುಸಿದು ಬಿದ್ದಿದ್ದರಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ದಕ್ಷಿಣ ಮತಕ್ಷೇತ್ರದಲ್ಲಿರುವ ನಗರದ ಮಹಾದ್ವಾರ ರಸ್ತೆಯ ವಿನೋದ ಭಾಗವತ್‌ ಎಂಬವರ ಮನೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

ಸಂಪೂರ್ಣ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಐದು ಲಕ್ಷ ರೂ. ನೀಡುವುದಾಗಿ ಘೋಷಿಸಿದೆ. ನೆರೆ ಸಂತ್ರಸ್ತರಿಗೆ ಲಕ್ಷ ರೂ. ನೀಡಿ ಮನೆ ಕಟ್ಟಿಕೊಳ್ಳಲು ಅನುವು ಮಾಡಿ ಕೊಟ್ಟಿದ್ದು, ಗುರುವಾರವಷ್ಟೇ ನಿರಾಶ್ರಿತರ ಬ್ಯಾಂಕ್‌ ಖಾತೆಗೆ ಮೊದಲ ಕಂತು ಒಂದು ಲಕ್ಷ ರೂ. ಪರಿಹಾರ ಜಿಲ್ಲಾಡಳಿತ ಹಾಕಿದೆ. ಈ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಚಾಲನೆ ಸಿಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next