Advertisement

ಧುಮ್ಮಿಕ್ಕಿ ಹರಿದ ದೂಧಸಾಗರ ಜಲಪಾತ : ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತ

12:48 PM Jul 23, 2021 | Team Udayavani |

ಪಣಜಿ: ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾದ ಜಗತ್ಪ್ರಸಿದ್ಧ ದೂಧಸಾಗರ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು ಈ ಭಾಗದಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತಗೊಂಡಿದೆ.

Advertisement

ಗೋವಾದ ದೂಧಸಾಗರ ಜಲಪಾತದ ಬಳಿ ಭಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದು ಶುಕ್ರವಾರ ಬೆಳಿಗ್ಗೆ ಬೆಳಗಾವಿ -ವಾಸ್ಕೊಡಗಾಮಾ ರೈಲು ಸಂಚಾರ ಜಲಪಾತದ ಬಳಿಯೇ ಸ್ಥಗಿತಗೊಂಡಿದೆ.

ಕೊಂಕಣ ರೈಲು ಹಳಿಗಳ ಮೇಲೆ ಮಳೆಗೆ ಗುಡ್ಡ ಕುಸಿತವುಂಟಾಗಿರುವುದರಿಂದಲೂ ಮುಂಬಯಿ ಮತ್ತು ವಿವಿದೆಡೆಯಿಂದ ಗೋವಾಕ್ಕೆ ಕೆಲ ರೈಲು ಸಂಚಾರ ಬಂದ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next