Advertisement
ಹದಿನೆಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದ ಕ್ಷೇತ್ರಗಳಲ್ಲಿ ಇಂಥವರಿಗೇ ಟಿಕೆಟ್ ಸಿಗುತ್ತದೆ. ಶಾಸಕರು ಆತಂಕಪಡಬೇಕಿಲ್ಲ ಎಂದು ಹೇಳುವ ಸ್ಥಿತಿ ಇಲ್ಲ. ಶಾಸಕರು ಸಹ ನಮಗೇ ಟಿಕೆಟ್ ಸಿಗುತ್ತದೆ ಎಂದೂ ಧೈರ್ಯದಿಂದ ಹೇಳಿಕೊಂಡು ಓಡಾಡುತ್ತಿಲ್ಲ. ಇದಕ್ಕೆ ಪಕ್ಷದೊಳಗಿನ ಆಕಾಂಕ್ಷಿಗಳ ಪಟ್ಟಿ ಮತ್ತು ಮನಸ್ತಾಪ ಪ್ರಮುಖ ಕಾರಣ. ಭಿನ್ನಮತ ಶಮನಕ್ಕೆ ರಾಜ್ಯಮಟ್ಟದ ನಾಯಕರ ಸಮ್ಮುಖದಲ್ಲಿ ಸಾಕಷ್ಟು ಸಭೆಗಳು ನಡೆದಿದ್ದರೂ ಆಂತರಿಕ ಬೇಗುದಿ ಇನ್ನೂ ಕುದಿಯುತ್ತಲೇ ಇದೆ.
Related Articles
Advertisement
ಅಥಣಿಯಲ್ಲಿ ರಮೇಶ್ ಜಾರಕಿ ಹೊಳಿ ತಮ್ಮ ಆಪ್ತ ಹಾಗೂ ಹಾಲಿ ಶಾಸಕ ಮಹೇಶ್ ಕುಮಟಳ್ಳಿ ಪರ ಟಿಕೆಟ್ಗೆ ಪಟ್ಟು ಹಿಡಿದಿದ್ದರೆ ಬೆಳಗಾವಿ ಉತ್ತರದಲ್ಲಿ ಲಿಂಗಾಯತ ಸಮಾಜದ ಮುಖಂಡರು ಮತ್ತು ದಕ್ಷಿಣ ಹಾಗೂ ಬೆಳಗಾವಿ ಗ್ರಾಮೀಣದಲ್ಲಿ ಮರಾಠಾ ಸಮುದಾಯದವರು ಬೇಡಿಕೆ ಇಟ್ಟಿದ್ದಾರೆ. ಇದು ಪಕ್ಷದಲ್ಲಿ ಆಂತರಿಕ ಬೇಗುದಿ ಹೆಚ್ಚಾಗಲು ಕಾರಣವಾಗಿದೆ.
ಅಥಣಿ ಕ್ಷೇತ್ರದ ಜತೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಅವರ ಹಸ್ತ ಕ್ಷೇಪ ಪಕ್ಷದ ಕಾರ್ಯಕರ್ತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆದರೆ ಯಾರೂ ಧೈರ್ಯದಿಂದ ಮುಂದೆ ಬಂದು ಇದನ್ನು ಹೇಳುತ್ತಿಲ್ಲ. ಈ ಕ್ಷೇತ್ರ ದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಮತ್ತು ಧನಂಜಯ ಜಾಧವ ಪ್ರಬಲ ಆಕಾಂಕ್ಷಿಗಳು. ಇವರಿಬ್ಬರ ಮಧ್ಯೆ ರಮೇಶ ಜಾರಕಿಹೊಳಿ ತಮ್ಮ ಆಪ್ತ ನಾಗೇಶ ಮುನ್ನೋಳಕರ ಅವರ ಹೆಸರನ್ನು ತಂದಿರುವುದು ಉಳಿದವರಿಗೆ ಸರಿ ಬಂದಿಲ್ಲ. ಇದು ಆಂತರಿಕವಾಗಿ ಸಮಸ್ಯೆ ತಂದಿಟ್ಟಿದೆ. ಮುಂದೆ ಇದು ಚುನಾವಣೆ ಮೇಲೆ ಪರಿಣಾಮ ಬೀರಿದರೂ ಅಚ್ಚರಿಯಿಲ್ಲ.
ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರದ ಪತನ ಮತ್ತು ಬಿಜೆಪಿ ಸರಕಾರದ ರಚನೆಗೆ ಪ್ರಮುಖ ಕಾರಣರಾಗಿದ್ದ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಸಹ ಬೇರೆಯವರ ಹಸ್ತಕ್ಷೇಪ ಜೋರಾಗಿಯೇ ನಡೆದಿದೆ. ಪಕ್ಷದೊಳಗಿನ ಕೆಲವು ಪ್ರಭಾವಿ ನಾಯಕರು ಲಿಂಗಾಯತ ಸಮಾಜದವರನ್ನು ರಮೇಶ್ಜಾರಕಿಹೊಳಿ ವಿರುದ್ಧ ಎತ್ತಿ ಕಟ್ಟುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬಹಿರಂಗವಾಗಿ ಜಾರಕಿಹೊಳಿ ವಿರುದ್ಧ ಟೀಕಾ ಪ್ರಹಾರ ಮೂಲಕ ಅವರ ಟಿಕೆಟ್ ತಪ್ಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.
ಈ ಎಲ್ಲ ಮನಃಸ್ತಾಪ, ಭಿನ್ನಮತದ ಮಧ್ಯೆ ಟಿಕೆಟ್ ವಿಚಾರದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜಿಲ್ಲೆಗೆ ಭೇಟಿ ನೀಡಿ ಯಾರಿಗೆ ಟಿಕೆಟ್ ನೀಡಬೇಕು. ಯಾರಿಗೆ ಗೆಲ್ಲುವ ಸಾಮ ರ್ಥ್ಯ ಇದೆ ಎಂಬುದರ ಬಗ್ಗೆ ಅಭಿಪ್ರಾಯ ಪಡೆದಿದ್ದಾರೆ. ಆದರೆ ಕೇಂದ್ರ ಸಚಿವರ ಈ ಅಭಿ ಪ್ರಾಯ ಸಂಗ್ರಹ ಪಕ್ಷದೊಳಗಿನ ಬೇಗುದಿ ಕಡಿಮೆ ಮಾಡಲಿದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
-ಕೇಶವ ಆದಿ