Advertisement

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

12:02 AM Mar 18, 2024 | Team Udayavani |

ಹುಬ್ಬಳ್ಳಿ: ತನಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್‌ ರವಿವಾರ ದಿಲ್ಲಿಗೆ ತೆರಳಿದ್ದಾರೆ.

Advertisement

ಹೊರಗಿನವರಿಗೆ ಟಿಕೆಟ್‌ ನೀಡಬಾರದು ಎಂದು ಕೆಲವರು ಆಗ್ರಹಿಸುತ್ತಿದ್ದರೂ, ಶೆಟ್ಟರ್‌ ಅವರೇ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಶೆಟ್ಟರ್‌ಗೆ ಟಿಕೆಟ್‌ ನೀಡದಂತೆ ಕೆಲವರು ನಾಯಕರೊಬ್ಬರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೆಟ್ಟರ್‌ ದಿಲ್ಲಿಗೆ ದೌಡಾಯಿಸಿದ್ದಾರೆ.

ಶೆಟ್ಟರ್‌ ಹೆಸರು ಮುಂಚೂಣಿಯಲ್ಲಿ: ಜೋಷಿ
ಬೆಳಗಾವಿಗೆ ಜಗದೀಶ ಶೆಟ್ಟರ್‌ ಹೆಸರು ಮುಂಚೂಣಿ ಯಲ್ಲಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹುಬ್ಬಳ್ಳಿಯಲ್ಲಿ ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next