Advertisement

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

12:27 AM Oct 27, 2024 | Team Udayavani |

ಬೆಳಗಾವಿ: ಕರ್ತವ್ಯನಿರತ ಅರಣ್ಯ ಸಿಬಂದಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಹಲವು ಸಿಬ್ಬಂದಿ ಗಾಯಗೊಂಡ ಘಟನೆ ಶನಿವಾರ ಖಾನಾಪುರ ತಾಲೂಕಿನ ಚಾಪಗಾಂವ-ಹಡಲಗಾ ರಸ್ತೆಯಲ್ಲಿ ಸಂಭವಿಸಿದೆ.

Advertisement

ಆಕಸ್ಮಿಕವಾಗಿ ಜೇಣು ನೊಣಗಳು ದಾಳಿ ಮಾಡಿದ ಈ ಘಟನೆಯಲ್ಲಿ ಗಾಯಗೊಂಡವರಿಗೆ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಒಬ್ಬ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿದ್ದರಿಂದ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next