Advertisement

ಬೆಳಗಾವಿ: ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಸಂಸದೆ ಮಂಗಳಾ ಅಂಗಡಿ ಆಕ್ರೋಶ

11:11 PM Mar 30, 2024 | Team Udayavani |

ಬೆಳಗಾವಿ: ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಮ್ಮ ಕುಟುಂಬದ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಸಂಸದೆ ಮಂಗಳಾ ಸುರೇಶ ಅಂಗಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಚಿವರು ಕೀಳುಮಟ್ಟದ ರಾಜಕಾರಣ ಮಾಡುವದನ್ನು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

Advertisement

ಜಗದೀಶ ಶೆಟ್ಟರ ಅವರು ಅಂಗಡಿ ಕುಟುಂಬದ ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬ ಸಚಿವೆ ಹೆಬ್ಬಾಳಕರ ಹೇಳಿಕೆಗೆ ಪತ್ರಿಕಾ ಪ್ರಕಟಣೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಸಂಸದೆ, ಟಿಕೆಟ್ ಕಿತ್ತುಕೊಂಡಿದ್ಧಾರೆ ಎನ್ನುವಂತಹ ಕ್ಷುಲ್ಲಕ ಹೇಳಿಕೆಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ. ಲಕ್ಷ್ಮಿ ಹೆಬ್ಬಾಳಕರ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೆ ಸಲ ಶಾಸಕಿ ಆಗುತ್ತಲೆ ಸಚಿವರೂ ಆಗಿದ್ದಾರೆ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು. ಆದರೆ ಈ ವಿಷಯವನ್ನು ಇದುವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮಗೆ ಪಕ್ಷ ಮೊದಲು ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಮ್ಮ ಕುಟುಂಬ ವಿರೋಧ ಮಾಡಿಲ್ಲ. ಯಾವತ್ತೂ ಬಿಜೆಪಿ ಸಿದ್ದಾಂತ ನಂಬಿ ರಾಜಕೀಯ ಮಾಡಿದ್ದೇವೆ. ಸುರೇಶ ಅಂಗಡಿ ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ರಾಜಕಾರಿಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತು. ಈ ಬಾರಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತತ್ ಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next