Advertisement

ಬೆಳ್ಳಾರೆ: ಜೀವ ಬೆದರಿಕೆಯೊಡ್ಡಿದ ಆರೋಪಿ ಬಂಧನ

10:35 PM Sep 11, 2022 | Team Udayavani |

ಸುಳ್ಯ: ಹಿಂದೂ ಕಾರ್ಯಕರ್ತನೋರ್ವನಿಗೆ ನಿಂದಿಸಿ, ಜೀವ ಬೆದರಿಕೆಯೊಡ್ಡಿದ ಆರೋಪಿಯನ್ನು ಪೊಲೀಸರು ರವಿವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

Advertisement

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್‌ ಬೆಳ್ಳಾರೆಯ ಸಹೋದರ ಅಬ್ದುಲ್‌ ಸಫ್ರಿಜ್ (21) ಬಂಧಿತ ಆರೋಪಿ.

ಬೆಳ್ಳಾರೆಯ ಪ್ರಶಾಂತ್‌ ಪೂಂಜ ಅವರಿಗೆ ಶನಿವಾರ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬೆಳ್ಳಾರೆಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೊಂದು ಅಸಂಜ್ಞೆಯ ಅಪರಾಧವಾಗಿರುವುದರಿಂದ ನ್ಯಾಯಾಲಯದ ಅನುಮತಿಯಂತೆ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಸಫ್ರಿಜ್‌ನನ್ನು ಮಂಗಳೂರಿನಲ್ಲಿ ಬಂಧಿಸಿದ್ದರು. ಆತನಿಗೆ ಜಾಮೀನು ದೊರೆತಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next