Advertisement

ವಚನಕಾರರಲ್ಲಿ ದಾಸಿಮಯ್ಯ ಅಗ್ರಗಣ್ಯ

05:04 PM Apr 11, 2019 | Naveen |

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ
ಅವರ ಜಯಂತಿಯನ್ನು ಅತ್ಯಂತ ಸರಳವಾಗಿ ಬುಧವಾರ ಆಚರಣೆ
ಮಾಡಲಾಯಿತು.

Advertisement

ಲೋಕಸಭಾ ಚುನಾವಣಾ-2019ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ
ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಡಳಿತದ
ವತಿಯಿಂದ ಸರಳವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ
ಜಿಲ್ಲಾ ಚುನಾವಣಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌, ದೇವರ
ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ಕುಮಾರ್‌, ಸಹಾಯಕ
ಆಯಕ್ತ ರಮೇಶ್‌.ಪಿ ಕೋನರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ನಾಗರಾಜ್‌, ದೇವರ ದಾಸಿಮಯ್ಯ ಸಂಘದ ಜಿಲ್ಲಾಧ್ಯಕ್ಷ ದೇವಾನಂದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next