Advertisement

ಮಹಾವೀರರ ಚಿಂತನೆಗಳು ಇಂದಿಗೂ ಪ್ರಸ್ತುತ

04:04 PM Apr 18, 2019 | Naveen |

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಭಗವನ್‌ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.

Advertisement

ಲೋಕಸಭಾ ಚುನಾವಣಾ-2019 ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಗವನ್‌ ಮಹಾವೀರ ಜಯಂತಿಯನ್ನು
ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿ ಕಾರಿ ಡಾ| ರಾಮ್‌
ಪ್ರಸಾತ್‌ ಮನೋಹರ್‌ ಭಗವನ್‌ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಭಗವನ್‌ ಮಹಾವೀರರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ತಹಶೀಲ್ದಾರ್‌
ವಿಶ್ವಜೀತ್‌ ಮೆಹತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ
ನಿರ್ದೇಶಕ ಕೆ.ನಾಗರಾಜ್‌, ಜೈನ್‌ ಸಂಘದ ಜಿಲ್ಲಾಧ್ಯಕ್ಷ ಭಾಗೂಚಿ ಹಾಗೂ ಗಣ್ಯವ್ಯಕ್ತಿಗಳು ಸೇರಿದಂತೆ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next