Advertisement

Bellary; ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ 10 ವರ್ಷ ಕಠಿಣ ಸಜೆ

09:28 PM Aug 20, 2024 | Team Udayavani |

ಬಳ್ಳಾರಿ: ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಜಿಲ್ಲೆಯ ಸಿರುಗುಪ್ಪ ತಾಲೂಕು ಬೈರಗಾಮ ದಿನ್ನಿ ಗ್ರಾಮದ ನಿವಾಸಿ ಕಾಳಪ್ಪ ಎಂಬ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆಯೊಂದಿಗೆ 1.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಮಂಗಳವಾರ ತೀರ್ಪು ನೀಡಿದ್ದಾರೆ.

Advertisement

ಹಾಳ್‌ಮುರಣಿ ಗ್ರಾಮದ ಸರ್ವೆ ನಂ.37.ಬಿ/21.64 ಎಕರೆ ಜಮೀನಿನಲ್ಲಿ ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ 54 ಗಾಂಜಾ ಗಿಡಗಳನ್ನು ಬೆಳೆಸಿದ್ದಾನೆ. (31.700 ಕಿ.ಗ್ರಾ) ಈ ಕುರಿತು ಮಾಹಿತಿ ತಿಳಿದ ಉಪ ನಿರೀಕ್ಷಕ ಶಂಕರ್ ಗುಡದರ್, ಗಾಂಜಾ ಗಿಡಗಳನ್ನು ಜಪ್ತು ಪಡಿಸಿಕೊಂಡು ಆರೋಪಿ ಕಾಳಪ್ಪನ ವಿರುದ್ಧ ನಿಯಮ ಉಲ್ಲಂಘನೆ ಸೇರಿ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಅಬಕಾರಿ ಉಪನಿರೀಕ್ಷಕರಾದ ಆರ್.ಗಂಗಾಧರ, ಮೌನೇಶ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು, 6 ಜನ ಸಾಕ್ಷಿದಾರರನ್ನು ವಿಚಾರಿಸಿ, 24  ದಾಖಲೆಗಳನ್ನು ಗುರುತಿಸಿ, ವಾದ ಪ್ರತಿವಾವನ್ನು ಆಲಿಸಿ, ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ಕಾಳಪ್ಪನಿಗೆ 10 ವರ್ಷ ಕಠಿಣ ಶಿಕ್ಷೆ, 1.50 ಲಕ್ಷ ರೂ. ಹಣ ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next