Advertisement

ಲಾರಿ – ಬೊಲೆರೊ ಡಿಕ್ಕಿ; ಮೂವರ ದುರ್ಮರಣ, ಮೂವರು ಗಂಭೀರ

09:47 AM Oct 29, 2019 | keerthan |

ಬಳ್ಳಾರಿ: ದೀಪಾವಳಿ ಪಾಡ್ಯ ದಿನದಂದು ಗಣಿನಾಡು ಬಳ್ಳಾರಿಯಲ್ಲಿ ಸೂತಕ ಛಾಯೆ ಆವರಿಸಿದೆ.

Advertisement

ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಬೊಲೆರೊ- ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದು, ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾದ ಬುಸ್ಸಿ (21), ದಾದಾ ಕಲಂದರ (31), ಅಸ್ಲಾಂ (25) ಮೃತರೆಂದು ಗುರುತಿಸಲಾಗಿದೆ. ಪರಶುರಾಮ (28) ಮತ್ತು ಮನ್ಸೂರ್ (30) ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇರ್ಫಾನ್ (32) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಂಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಯಶವಂತ‌ ನಗರದಿಂದ ತೋರಣಗಲ್ಲಿನ‌ ಜಿಂದಾಲ್ ಉಕ್ಕು ಕಾರ್ಖಾನೆಗೆ ಹೋಗುತ್ತಿರುವಾಗ ಈ ಅಪಘಾತ ಸಂಭಿಸಿದೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next