Advertisement

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

01:22 PM Oct 17, 2024 | Team Udayavani |

ಬಳ್ಳಾರಿ: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ನಾಗೇಂದ್ರ ಭರ್ಜರಿ ಡ್ಯಾನ್ಸ್ ಮಾಡಿದರು.

Advertisement

ಮೂರು ತಿಂಗಳ ಸೆರೆವಾಸದ ಬಳಿಕ ಗುರುವಾರ (ಅ.17) ಬಳ್ಳಾರಿಗೆ ಬಂದ ಮಾಜಿ ಸಚಿವ ನಾಗೇಂದ್ರರನ್ನು ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರು.

ನಾಗೇಂದ್ರ ವಾಲ್ಮೀಕಿ ನಿಯಮದ ಹಗರಣದಲ್ಲಿ ಸಿಲುಕಿ ಬಂಧಿತರಾಗಿದ್ದರು. ವಾಲ್ಮೀಕಿ ಜಯಂತಿ ದಿನವೇ ಬಳ್ಳಾರಿಗೆ ಬಂದ ಶಾಸಕ ಬಿ ನಾಗೇಂದ್ರಗೆ ಬಳ್ಳಾರಿಗೆ ಅದ್ಧೂರಿ ಸ್ವಾಗತ ಮಾಡಲಾಗಿದೆ.  ಎಸ್ಪಿ ಸರ್ಕಲ್ ಬಳಿ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ನಾಗೇಂದ್ರ ಮತ್ತು ಶಾಸಕ ಭರತ್ ರೆಡ್ಡಿ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಕಾರ್ಯಕರ್ತರ ಸಂಭ್ರಮಾಚರಣೆ ನೋಡಿ ನಾಗೇಂದ್ರ ಕೂಡಾ ಹೆಜ್ಜೆ ಹಾಕಿ ಸಂಭ್ರಮಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next