Advertisement

ವಿಮ್ಸ್‌ ಶುಶ್ರೂಷಕರ ವೇತನ ಬಿಡುಗಡೆಗೆ ಒತ್ತಾಯ

03:36 PM Jul 09, 2020 | Naveen |

ಬಳ್ಳಾರಿ: ಕಳೆದ ಐದು ತಿಂಗಳಿಂದ ನೀಡದ ಬಾಕಿ ವೇತನವನ್ನು ಪಾವತಿಸಿ, ಗುತ್ತಿಗೆ ಅವಧಿಯನ್ನು ನವೀಕರಿಸಬೇಕೆಂದು ಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ವಿಮ್ಸ್ ವೈದ್ಯಕೀಯ ಆಸ್ಪತ್ರೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

Advertisement

ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಶುಶ್ರೂಷಕರ ವೇತನದಲ್ಲಿ ತಾರತಮ್ಯ ಎಸಗಲಾಗಿದೆ. ಮೂರು ತಿಂಗಳಿನಿಂದ ಬಾಕಿ ಇರುವ ವೇತನವನ್ನು ಈವರೆಗೆ ಪಾವತಿಸಿಲ್ಲ. ಗುತ್ತಿಗೆ ಆಧಾರದ ಶುಶ್ರೂಷಕರನ್ನು ಕೋವಿಡ್‌ ವಾರ್ಡುಗಳಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದು ಆದೇಶ ಹೊರಡಿಸಲಾಗಿದ್ದು, ಅದರಂತೆ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಶುಶ್ರೂಷಕರಿಗೆ ಕೋವಿಡ್ ಸೋಂಕು ಹರಡಿದೆ. ಆದರೂ ಜೀವ ಪಣಕ್ಕಿಟ್ಟು ಕಾರ್ಯನಿರ್ವಹಿಸುತ್ತಿದ್ದರೂ ವೇತನ ಪಾವತಿಸಿಲ್ಲ ಎಂದು ಪ್ರತಿಭಟನಾನಿರತ ಶುಶ್ರೂಷಕರು ಆರೋಪಿಸಿದರು.

ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಐಟಿಯು ನೇತೃತ್ವದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘಟನೆ ಮುಖಂಡ ಜೆ. ಸತ್ಯಬಾಬು ಆಗ್ರಹಿಸಿದರು. ಮುಖಂಡರಾದ ಯು. ಬಸವರಾಜ, ಚಂದ್ರಕುಮಾರಿ, ಗಾದಿಲಿಂಗಪ್ಪ, ಕರಿಬಸಪ್ಪ ಮತ್ತು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next