Advertisement

ಕೋವಿಡ್ ಗೆ ಜಾಗೃತಿಯೇ ಮದ್ದು

07:16 PM Jun 12, 2020 | Naveen |

ಬಳ್ಳಾರಿ: ಮಹಾ ಹೆಮ್ಮಾರಿ ಕೋವಿಡ್ ನಮ್ಮನ್ನು ಬಿಟ್ಟು ಹೋಗುವ ಲಕ್ಷಣಗಳು ಸದ್ಯ ಕಾಣುತ್ತಿಲ್ಲ. ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ನಾವು ಅದರೊಂದಿಗೆ ಹೋರಾಡಬೇಕಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಹೇಳಿದರು.

Advertisement

ನಗರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಹಾಗೂ ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಮಾಸ್ಕ್ ಗಳನ್ನು ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಆಗಾಗ್ಗೆ ಕೈತೊಳೆಯುವುದನ್ನು ರೂಢಿಸಿಕೊಳ್ಳಬೇಕು. ಇದರ ಜೊತೆಗೆ ಸ್ಯಾನಿಟೈಸರ್‌ ಬಳಕೆಯನ್ನೂ ತಪ್ಪದೇ ಮಾಡಬೇಕು. ರೋಗ ನಿರೋಧಕ ಶಕ್ತಿ ಇರುವ ಆಹಾರ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡಬೇಕು. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಸಂಘದ ಎಲ್ಲ ಸದಸ್ಯರಿಗೆ ಕೋವಿಡ್‌-19 ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ವಿಭಾಗದ ಗುಂಪು ಲೆಕ್ಕಪರಿಶೋಧನೆ ಯೋಜನಾಧಿಕಾರಿ ಜಿನ್ನಪ್ಪ ಅವರು ಸಂಘದ ಸದಸ್ಯರಿಗೆ ಕೋವಿಡ್‌-19 ಕುರಿತು ಜಾಗೃತಿ ಮೂಡಿಸಿದರು. ನಿರಂಜನ್‌ ಎಂ.ಆರ್‌, ಪದ್ಮಾವತಿ, ಶಂಕ್ರಯ್ಯ ಇದ್ದರು. ಇದೇ ವೇಳೆ ಎಲ್ಲರಿಗೂ ಮಾಸ್ಕ್ ಗಳನ್ನು ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next