Advertisement

ಅರಣ್ಯ ಇಲಾಖೆ ಸಿಬ್ಬಂದಿಗೆ ಮಾತ್ರೆ ವಿತರಣೆ

12:08 PM Jul 09, 2020 | Naveen |

ಬಳ್ಳಾರಿ: ನಗರದ ಅರಣ್ಯ ವೃತ್ತ ಕಚೇರಿಯಲ್ಲಿ ಕಚೇರಿ ಸಿಬ್ಬಂದಿಗಳಿಗೆ ಕೋವಿಡ್‌ ಬರದಂತೆ ಮುನ್ನೆಚ್ಚರಿಕೆ ವಹಿಸುವ ಹಾಗೂ ರೋಗನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆಗಳನ್ನು ಆಯುಷ್‌ ಇಲಾಖೆ ವತಿಯಿಂದ ವಿತರಿಸಲಾಯಿತು.

Advertisement

ತಾರಾನಾಥ ಆಯುರ್ವೇದ ಕಾಲೇಜಿನ ವೈದ್ಯರು ಹಾಗೂ ಸಂಜೀವಿನಿ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ| ಪ್ರತಿಭಾ ಹಾಗೂ ಕಾರ್ಯದರ್ಶಿ ಶ್ರೀನಿವಾಸ್‌, ಅರಣ್ಯ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಸಿ. ನಾಗರಾಜ ಅವರು ಅರಣ್ಯ ಇಲಾಖೆ ಕಚೇರಿ ಸಿಬ್ಬಂದಿಗೆ ವಿತರಿಸಿದರು. ಸೇವಾ ಟ್ರಸ್ಟ್‌ನ ಅಧ್ಯಕ್ಷ ಡಾ| ಎ.ಎಸ್‌. ಪಾಟೀಲ್‌ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ಔಷಧಗಳ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಡಿ. ರಾಜಪ್ಪ,ಆಯುಷ್‌ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next