Advertisement

ಕೋವಿಡ್ ವಾರಿಯರ್ಸ್ ಗೆ ಹೂ ಮಳೆ

06:17 PM Apr 17, 2020 | Naveen |

ಬಳ್ಳಾರಿ: ಕೋವಿಡ್ ವೈರಸ್‌ ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಕ್ವಾರಂಟೈನ್‌ ಪ್ರದೇಶವನ್ನಾಗಿ ಗುರುತಿಸಲಾದ ಗುಗ್ಗರಹಟ್ಟಿ ಪ್ರದೇಶದಲ್ಲಿ ಮನೆಮನೆ ಸಮೀಕ್ಷೆ ನಡೆಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಪೊಲೀಸ್‌ ಸಿಬ್ಬಂದಿ, ಪೌರ ಕಾರ್ಮಿಕರಿಗೆ ಸ್ಥಳೀಯರು ಗುರುವಾರ ಹೂಮಳೆ ಸುರಿಸಿ ಕೃತಜ್ಞತೆ ಸಲ್ಲಿಸಿದರು.

Advertisement

ಗುಗ್ಗರಹಟ್ಟಿ ಪ್ರದೇಶದಲ್ಲಿ ಮಾ.30 ರಂದು ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಸುತ್ತಲಿನ ಒಂದು ಕಿಮೀ ವ್ಯಾಪ್ತಿಯಲ್ಲಿ ಕ್ವಾರಂಟೈನ್‌ ಪ್ರದೇಶವೆಂದು ಗುರುತಿಸಿತ್ತು. ಈ ಪ್ರದೇಶದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ತೆರಳಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ. ಪೊಲೀಸ್‌ ಸಿಬ್ಬಂದಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಸ್ವತ್ಛತೆ ಕಾಪಾಡುವುದರ ಜತೆಗೆ ಫಾಗಿಂಗ್‌ ಮಾಡುವ ಮೂಲಕ ಕೋವಿಡ್ ವೈರಸ್‌ ನಿಯಂತ್ರಿಸುವಲ್ಲಿ ಅವಿರತ ಶ್ರಮಿಸುತ್ತಿದ್ದಾರೆ. ಇಂತಹ ಕೊರೊನಾ ವಾರಿಯರ್ಸ್‌ಗೆ ಹೂ ನೀಡಿ ಆರತಿ ಬೆಳಗಿ ಸನ್ಮಾನಿಸಿದರು.

ಜತೆಗೆ ಸಾಲಾಗಿ ಕರ್ತವ್ಯಕ್ಕೆ ಹೋಗುತ್ತಿದ್ದ ವಾರಿಯರ್ಸ್‌ಗೆ ರಸ್ತೆ ಎರುಡು ಬದಿ ಮಹಡಿಗಳ ಮೇಲೆ ನಿಂತು ಹೂವಿನ ಮಳೆಗೈಯ್ಯುವ ಮೂಲಕ ಅವರ ಸೇವೆಯನ್ನು ಶ್ಲಾಘಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next