Advertisement

Bellary; ವಾಲ್ಮೀಕಿ ನಿಗಮ ಅವ್ಯವಹಾರ ತನಿಖೆಯನ್ನು ಸಿಬಿಐಗೆ ವಹಿಸಲಿ: ಶ್ರೀರಾಮುಲು

03:11 PM Jun 28, 2024 | Team Udayavani |

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಖಂಡಿಸಿ ಬಳ್ಳಾರಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಪ್ರತಿಭಟನೆ ನಡೆಸಿತು. ಬಳ್ಳಾರಿ ಜಿಲ್ಲಾಧಿಕಾರಿ ಗೇಟ್ ಮುಂದೆ ಕುಳಿತು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದರು. ನ್ಯಾಯ ಸಿಗುವವರೆಗೂ ಇಲ್ಲಿಂದ ಹೋಗುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

Advertisement

ಈ ವೇಳೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಪ್ರಕರಣದ ಕಿಂಗ್ ಪಿನ್ ಯಾರು? ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ದಲಿತ ಅಹಿಂದ ಪರ ಎನ್ನುವ ಸಿದ್ದರಾಮಯ್ಯ ಪ್ರಕರಣ ಸಿಬಿಐಗೆ ವಹಿಸದೆ ಇದ್ದರೆ ಸಿದ್ದರಾಮಯ್ಯ ಮೇಲೆ ಅನುಮಾನ ಬರುತ್ತದೆ ಎಂದರು.

ಬಿಜೆಪಿ ಹೋರಾಟಕ್ಕೆ ಮಾತ್ರ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಹೊರತು ಆರೋಪವಿದೆ ಎಂದು ರಾಜೀನಾಮೆ ನೀಡಿಲ್ಲ. ವಾಲ್ಮೀಕಿ ಜನಾಂಗದ ಅಭಿವೃದ್ಧಿ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಭ್ರಷ್ಟಾಚಾರ ಅಂದರೆ ಸಣ್ಣ ಪದ ಕಳ್ಳತನ ಮಾಡಿದ್ದಾರೆ ಎನ್ನುವದು ಸೂಕ್ತ. ಇದು ಒಬ್ಬರು ಇಬ್ಬರು ಮಾಡಿದ ಕಳ್ಳತನ ಅಲ್ಲ ಕಳ್ಳರ ಸಂತೆಯೇ ಇಲ್ಲಿ ಸೇರಿಕೊಂಡಿದೆ ಎಂದು ಸರ್ಕಾರದ ವಿರುದ್ಧ ರೋಷಾವೇಷದ ಮಾತುಗಳನ್ನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next