Advertisement

ಏಟು ತಿಂದು ಆಸ್ಪತ್ರೆಗೆ ದಾಖಲಾದ ಶಾಸಕ ಆನಂದ್ ಸಿಂಗ್

05:31 AM Jan 20, 2019 | |

ಬೆಂಗಳೂರು: ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಪ್ರಾಯ ಮೂಡಿದೆ. ಬಳ್ಳಾರಿ ಜಿಲ್ಲೆಯ ಚರ್ಚೆಯ ವೇಳೆ ಬಳ್ಳಾರಿ ಶಾಸಕರಾದ ಆನಂದ ಸಿಂಗ್ ಮತ್ತು ಜೆ.ಎನ್.ಗಣೇಶ್ ಜಗಳವಾಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಇದರಿಂದಾಗಿ ಶಾಸಕ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆನಂದ ಸಿಂಗ್ ರನ್ನು ರವಿವಾರ ಬೆಳಗ್ಗೆ 7 ಗಂಟೆಗೆ ಆಸ್ಪತ್ರಗೆ ದಾಖಲೆ ಮಾಡಲಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರಗೆ ಬಿಗು ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಸಂಸದ ಡಿ.ಕೆ.ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Advertisement

ಇದೀಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ ಸಿಂಗ್ ಹಾಗೂ ಜೆ.ಎನ್. ಗಣೇಶ್ ನಡುವೆ ಮಾತಿನಚಕಮಕಿ ನಡೆದಿದೆ. ಮತ್ತು ಒಂದು ಹಂತದಲ್ಲಿ ಇದು ವಿಕೋಪಕ್ಕೆ ತಿರುಗಿ ಹೊಯ್-ಕೈ ಮಟ್ಟಕ್ಕೆ ಹೋಗಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಗಣೇಶ್ ಅವರು ಆನಂದ್ ಸಿಂಗ್ ಅವರ ತಲೆಗೆ ಬಾಟ್ಲಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇವರಿಬ್ಬರ ಜಗಳವನ್ನು ಬಿಡಿಸಲು ಅಲ್ಲಿದ್ದ ಇತರೇ ಕಾಂಗ್ರೆಸ್ ಶಾಸಕರು ಬಹಳಷ್ಟು ಶ್ರಮವಹಿಸಿದರು ಎಂಬ ಅಂಶವೂ ತಿಳಿದುಬಂದಿದೆ.

ಮನಸ್ತಾಪ ಇಲ್ಲ : ಡಿ.ಕೆ.ಶಿ
ರೆಸಾರ್ಟ್ ನಲ್ಲಿ ಬಳ್ಳಾರಿ ಶಾಸಕರ ನಡುವೆ ಯಾವುದೇ ಜಗಳವಾಗಿಲ್ಲ. ನಮ್ಮ ಶಾಸಕರಲ್ಲಿ ಯಾವುದೇ ಮನಸ್ತಾಪ ಇಲ್ಲ. ಆನಂದ್ ಸಿಂಗ್ ಕುಟುಂಬದವರ ಜೊತೆ ಮದುವೆಗೆ ಹೋಗಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಆದರೆ ಈಗ ಆನಂದ್ ಸಿಂಗ್ ಆಸ್ಪತ್ರೆ ಗೆ ದಾಖಲಾಗಿದ್ದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next