Advertisement

ಬಳ್ಳಾರಿ ಜನ ನೂರಾರು ಡಿಕೆಶಿ ನೋಡಿದ್ದಾರೆ: ಶ್ರೀರಾಮುಲು

06:00 AM Oct 27, 2018 | Team Udayavani |

ಕೂಡ್ಲಿಗಿ: ಬಳ್ಳಾರಿ ಜಿಲ್ಲೆಯ ಜನ ನೂರಾರು ಡಿ.ಕೆ.ಶಿವಕುಮಾರ್‌ ಅವರನ್ನು ನೋಡಿದ್ದಾರೆ. ಹೀಗಾಗಿ ಯಾರು ಬಂದರೂ ಭಯಪಡಬೇಕಾದ ಅಗತ್ಯ ಇಲ್ಲ. ಬಳ್ಳಾರಿಯ ಜನತೆ ಬಿಜೆಪಿ ಗೆಲ್ಲಿಸುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಬಹಿರಂಗ ಸಭೆಯಲ್ಲಿ ಮಾತನಾಡಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ನನಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. 

Advertisement

ಶಿವಮೊಗ್ಗ, ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲ. ಬಳ್ಳಾರಿಯಲ್ಲಿ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಇರೋದು. ಅಲ್ಲಿ ಕಾಂಗ್ರೆಸ್‌ನ್ನು ಸೋಲಿಸುವ ಮೂಲಕ ಮುಂದಿನ ಚುನಾವಣೆಗೆ ಬಿಜೆಪಿ ಗೆಲುವಿಗೆ ದಿಕ್ಸೂಚಿಯಾಗಬೇಕೆಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ತಾವು ಪ್ರಚಾರ ಕೈಗೊಂಡಿದ್ದು, ಮತದಾರರು ಬಿಜೆಪಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸವಿದೆ.  3 ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿರುವುದು ಬಳ್ಳಾರಿಯಲ್ಲಿ ಮಾತ್ರ. ಹೀಗಾಗಿ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸೋತರೆ ರಾಜ್ಯದಲ್ಲಿ ಸೋತಂತೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next