Advertisement

Bellary; ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರೋಧಿಸಿ ಶೋಷಿತ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ

01:13 PM Aug 05, 2024 | Team Udayavani |

ಬಳ್ಳಾರಿ: ರಾಜ್ಯದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ಪಾದಯಾತ್ರೆ, ಹೋರಾಟ ಮಾಡುವುದನ್ನು ವಿರೋಧಿಸಿ ನಗರದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದಿಂದ ಸೋಮವಾರ (ಆ.05) ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಗಾಂಧಿಭವನದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಒಕ್ಕೂಟದ ನೂರಾರು ಸದಸ್ಯರು, ಅಲ್ಲಿಂದ ಗಡಗಿ ಚನ್ನಪ್ಪ ವೃತ್ತದ ಮೂಲಕ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದರು. ಬಳಿಕ ಡಿಸಿ ಕಚೇರಿ ಆವರಣಕ್ಕೆ ತಲುಪಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ, ರಾಜ್ಯಪಾಲ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಚಂದ್ರಚೂಡ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಸದ ಈ.ತುಕಾರಾಂ, ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್‌ಗಣೇಶ್, ಮೇಯರ್ ನಂದೀಶ್, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಬುಡಾ ಅಧ್ಯಕ್ಷ ಆಂಜನೇಯಲು ಸೇರಿ ಹಲವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next