Advertisement

ಅಕ್ರಮ ಪಡಿತರ ಅಕ್ಕಿ ವಶಕ್ಕೆ

04:47 PM Jun 25, 2020 | Naveen |

ಬಳ್ಳಾರಿ: ನಗರದ ಬಂಡೀಮೋಟ್‌ ಪ್ರದೇಶದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಅಡ್ಡೆ ಮೇಲೆ ಮಂಗಳವಾರ ದಾಳಿ ಮಾಡಿದ ಆಹಾರ ಇಲಾಖೆ ಅಧಿಕಾರಿಗಳು 71,370 ರೂ. ಮೌಲ್ಯದ 27.45 ಕ್ವಿಂಟಲ್‌ ಅಕ್ಕಿಯನ್ನು ವಶಪಡಿಕೊಂಡಿದ್ದಾರೆ ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Advertisement

ಮನೆಯ ಮುಂದುಗಡೆ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಪಡಿತರ ದಾಸ್ತನು ಮಾಡಿದ್ದರು. ದಾಳಿ ಮಾಡುತ್ತಿದ್ದಂತೆ ಅಲ್ಲಿದ್ದ ನೂರ್‌ ಸಾಬ್‌ ಮತ್ತು ರಾಮು ಪರಾರಿಯಾಗಿದ್ದು, ಅವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು. ದಾಳಿಯಲ್ಲಿ ಆಹಾರ ನಿರೀಕ್ಷಕ ಶರಣಬಸಯ್ಯ ಇದ್ದರು. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next