Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಗೊಂದಲ: ಸಹಾಯವಾಣಿಗೆ ಕರೆ ಮಾಡಿ

04:28 PM Jun 12, 2020 | Naveen |

ಬಳ್ಳಾರಿ: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜೂ.25ರಿಂದ ಜು.4ವರೆಗೆ ನಡೆಯುವ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಯ ಬಗ್ಗೆ ಗೊಂದಲ, ಸಂದೇಹ, ಸಮಸ್ಯೆ ಇನ್ನಿತರ ಯಾವುದೇ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಮಕ್ಕಳಿಗೆ ಪರೀಕ್ಷೆ ಬಗ್ಗೆ ಗೊಂದಲ, ಸಂದೇಹ, ಸಮಸ್ಯೆ ಇತ್ಯಾದಿ ಯಾವುದೇ ತರಹದ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್‌ ರೂಂ ದೂ. 08392-277100 ಮೂಲಕ ಆಯಾ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ದೂರವಾಣಿ ಕರೆ ಮಾಡಿ ಸಂದೇಹ ಪರಿಹರಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ, ಕೊಠಡಿ, ವೇಳಾಪಟ್ಟಿ ಹಾಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು. ಪಾಲಕರು, ಪೋಷಕರು, ಶಿಕ್ಷಕರು ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಹಾಯವಾಣಿ ನಿರ್ವಾಹಕ ಹಾಗೂ ಪೂರ್ವ ವಲಯದ ಶಿಕ್ಷಣ ಸಂಯೋಜಕರಾದ ಗೂಳೆಪ್ಪ, ಪಶ್ಚಿಮ ವಲಯದ (ಕುರುಗೋಡು) ಶಿಕ್ಷಣ ಸಂಯೋಜಕ ಭುಜಂಗಾಚಾರಿ ಅವರನ್ನು ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next