Advertisement

ಬಳ್ಳಾರಿ: ಬಸ್ ಹರಿದು ಮೂವರು ಕಾಲೇಜು ವಿದ್ಯಾರ್ಥಿಗಳು ಮೃತ್ಯು

10:28 AM Dec 19, 2022 | Team Udayavani |

ಬಳ್ಳಾರಿ: ತಾಲೂಕಿನ ಹಲಕುಂದಿ ಗ್ರಾಮದ ಕೋಳಿ ಫಾರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಹರಿದು ಮೂವರು ಹಾಸ್ಟೇಲ್‌ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಡಿ.18ರ ತಡರಾತ್ರಿ ಸಂಭವಿಸಿದೆ.

Advertisement

ಮೃತಪಟ್ಟವರನ್ನು ಮುರುಡಿ ನಿವಾಸಿ ಶಂಕರ್ (18) ಎಮ್ಮಿಗನೂರಿನ ಕನಕರಾಜ್ (19) ಹಾಗೂ ನಾಗೇನಹಳ್ಳಿಯ ಹೊನ್ನೂರ (22) ಎಂದು ಗುರುತಿಸಿದ್ದು, ಇವರು ಬಳ್ಳಾರಿ ನಗರದ ಹಾಸ್ಟೇಲ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಬಸ್ ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಹನವಿಲ್ಲದೆ ಮಧ್ಯರಾತ್ರಿ ಅಲ್ಲಿ ವಿದ್ಯಾರ್ಥಿಗಳು ಇದ್ದುದರ ಬಗ್ಗೆ ಹಲವಾರು ಅನುಮಾನಗಳಿವೆ. ಅಲ್ಲದೆ ಕಳೆದ ಎರಡು ದಿನಗಳಿಂದ ಅವರು ಹಾಸ್ಟಲ್ ತೊರೆದಿದ್ದರು ಎನ್ನಲಾಗುತ್ತದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next