Advertisement

ತಂದೆಯ ಶವಸಂಸ್ಕಾರಕ್ಕೆಂದು ಹೊರಟ ಕುಟುಂಬ ರಸ್ತೆ ಅಪಘಾತಕ್ಕೆ ಬಲಿ

09:59 AM Feb 04, 2020 | keerthan |

ಬಳ್ಳಾರಿ: ತಂದೆಯ ಶವ ಸಂಸ್ಕಾರಕ್ಕೆ ಹೋದವರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಕೂಡ್ಲಿಗಿ ಪಟ್ಟಣದ ವಿರುಪಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

Advertisement

ಕಾರು ಮತ್ತು ಟಿಪ್ಪರ್ ನಡುವಿನ ಮುಖಾಮುಖಿ ಢಿಕ್ಕಿಯಾದ ಘಟನೆಯಲ್ಲಿ ವಸಂತ ಕುಮಾರ್ (37), ಪತ್ನಿ ವಿನುತ (30) ಸೇರಿದಂತೆ ಡ್ರೈವರ್ ಮೃತಪಟ್ಟಿದ್ದಾರೆ. ಮಗಳು ಋತ್ವಿಕಾ (2) ಬದುಕುಳಿದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ವಸಂತ ಕುಮಾರ್ ಬಾಗಲಕೋಟೆ ಜಿಲ್ಲೆಯ ಇಳಕಲ್ಲು ಮೂಲದವರಾಗಿದ್ದು, ಮಡಿಕೇರಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಳಕಲ್ಲಿನಲ್ಲಿ ವಸಂತ ಕುಮಾರ್ ಅವರ ತಂದೆ ಮೃತಪಟ್ಟ ಹಿನ್ನಲೆ ಪತ್ನಿ ಮತ್ತು ಮಗಳೊಂದಿಗೆ ಶವ ಸಂಸ್ಕಾರಕ್ಕೆಂದು ಕಾರಿನಲ್ಲಿ ತೆರಳಿದ್ದರು.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಹೊರವಲಯದ ವಿರುಪಾಪುರ ಗ್ರಾಮದ ಬಳಿ ಟಿಪ್ಪರ್ ಲಾರಿಗೆ ವಸಂತ್ ಕುಮಾರ್ ಕುಟುಂಬವಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದು‌ ಮೂವರು ಸಾವನ್ನಪ್ಪಿದ್ದಾರೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next