Advertisement

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

03:49 PM May 04, 2024 | Team Udayavani |

ಬಳ್ಳಾರಿ: ಲೋಕಸಭೆ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗೆ ನಗರಕ್ಕೆ ಆಗಮಿಸಿದ್ದ ಯದುವೀರ್ ಒಡೆಯರ್ ದಲಿತಕೇರಿಯಲ್ಲಿ ಒಡಾಡಿ ಮತಯಾಚನೆ ಮಾಡಿದರು. ಅಲ್ಲದೆ ದಲಿತರ ಮನೆಯಲ್ಲಿ ಎಳನೀರು ಕುಡಿದರು.

Advertisement

ಬಳಿಕ ಮಾತನಾಡಿದ ಅವರು, ಹಂಪಿ – ಅಂಜನಾದ್ರಿಗೆ ಸಾಕಷ್ಟು ಬಾರಿ ಬಂದಿದ್ದೇನೆ ಪ್ರಚಾರಕ್ಕೆ ಇದೇ ಮೊದಲ ಬಾರಿ ಪ್ರಚಾರಕ್ಕೆ ಬಂದಿರುವೆ. ಜೈನ್ ಮಾರುಕಟ್ಟೆ ಮತ್ತು ಗೋನಾಳ ದಲಿತ ಕಚೇರಿಯಲ್ಲಿ ಪ್ರಚಾರ ಮಾಡಿದ್ದೇನೆ. ದಲಿತರ ಜೊತೆಗೆ ನಾವಿದ್ದೇವೆ. ಮೈಸೂರಿನ ಸಂಸ್ಥಾನಕ್ಕೂ ಸಂವಿಧಾನಕ್ಕೂ ಅವಿನಾಭಾವ ಸಂಬಂಧವಿದೆ. ಅಂಬೇಡ್ಕರ್ ಸಂವಿಧಾನ ರಚನೆ ವೇಳೆ ಮೈಸೂರಿನ ಪ್ರಜಾ ಪ್ರತಿನಿಧಿ ಸಮಯ ಉಲ್ಲೇಖಿಸಿದ್ದರು. ಅಂದಿನ ಕಾಲದಿಂದಲೂ ದಲಿತರಿಗೆ ಸಮಾನ ಅವಕಾಶ ನೀಡುತ್ತಾ ಬಂದಿದ್ದೇವೆ ಎಂದರು.

ಸಾಮಾನ್ಯ ಜನರ ಜೊತೆಗೆ ಮೈಸೂರಿನ ಮಹಾರಾಜ ಸದಾಕಾಲವೂ ಇದ್ದಾರೆ. ಒಗ್ಗಾಟ್ಟಾಗಿ ಎಲ್ಲರೂ ಭಾರತೀಯರಾಗಿ ಇರೋಣ. ಮಹಾರಾಜರ ಕುಟುಂಬ ಎಲ್ಲಾ ವರ್ಗದ ಜೊತೆಗೆ ಅಂದು ಮೈಸೂರಿನವರಾಗಿ ಇದೀಗ ಭಾರತೀಯರಾಗಿ ಇದ್ದೇವೆ. ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಮೈಸೂರಿನಲ್ಲಿ ತಾವೂ ಗೆಲ್ಲುವುದಾಗಿ ಯದುವೀರ್ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next