Advertisement

ಬೆಳ್ತಂಗಡಿ: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

05:40 PM Dec 08, 2020 | sudhir |

ಬೆಳ್ತಂಗಡಿ : ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿ ನಿಗೂಢವಾಗಿ ನಾಪತ್ತೆಯಾಗಿದ್ದ ಉಜಿರೆ ಶಿವಾಜಿ ನಗರದ ರೆಂಜಳ ನಿವಾಸಿ ರಮೇಶ್ (48) ಎಂಬವರ ಮೃತದೇಹವು ಮಂಗಳವಾರ ಪತ್ತೆಯಾಗಿದೆ.

Advertisement

ಸೋಮವಾರ ಸಂಜೆ 5 ಗಂಟೆ ಬಳಿಕ ರಮೇಶ್ ನಾಪತ್ತೆಯಾಗಿದ್ದು ಮನೆಮಂದಿ ಅವರ ಮೊಬೈಲ್ ಗೆ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಮಂಗಳವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಕರೆ ಮಾಡಿದ ಸಂದರ್ಭ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ಸಹೋದರ ಹೇಳಿದ್ದಾರೆ, ಇದರ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಬೆಳ್ತಂಗಡಿ ಸೋಮಾವತಿ ನದಿಯ ಜಾಕ್ ವೆಲ್ ಸಮೀಪ ದಡದಲ್ಲಿ ಇಂದು ಸಂಜೆ ಅವರ ಉಡುಗೆ ಮತ್ತು ಮೀನು ಹಿಡಿಯುವ ಬಲೆ, ಮೊಬೈಲ್ ಪತ್ತೆಯಾಗಿದೆ.

ಕೂಡಲೇ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಭೇಟಿ ನೀಡಿ ನದಿಯಲ್ಲಿ ಶೋಧಕಾರ್ಯ ಮುಂದುವರೆಸಿದ್ದಾರೆ. ಈ ವೇಳೆ ಸೋಮಾವತಿ ನದಿಯಲ್ಲಿ ರಮೇಶ್ ಅವರ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ:ಪಂಜಾಬ್ ನಲ್ಲಿ ಮತ್ತೆ ಉಗ್ರ ಚಟುವಟಿಕೆಗೆ ಸಂಚು: ಐಎಸ್ ಐಗೆ ಭಿಂದ್ರನ್ ವಾಲೆ ಸೋದರಳಿಯನ ಸಾಥ್!

ಮೀನು ಹಿಡಿಯಲು ಇಬ್ಬರು ಹೋಗಿರುವ ಶಂಕೆ :
ರಮೇಶ್ ನಾಪತ್ತೆಯಾದ ಕುರಿತು ಹುಡುಕಾಟ ಕುಟುಂಬಸ್ಥರು, ಸ್ಥಳೀಯರು, ಪೊಲೀಸ್ ಅಧಿಕಾರಿಗಳಿಗೆ ರಮೇಶ್ ಜೊತೆ ಇನ್ನೊಬ್ಬ ವ್ಯಕ್ತಿ ಇರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಆದರೆ ಆ ವ್ಯಕ್ತಿ ಯಾರು, ಘಟನೆ ಹೇಗಾಯಿತು ಎಂಬುದು ಪೋಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next